ಮೋದಿ 6 ಸಾವಿರ ರೂ.+ ಬಿಎಸ್’ವೈ 4 ಸಾವಿರ ರೂ.= ರೈತರಿಗೆ 10 ಸಾವಿರ ರೂ.!

Published : Jul 26, 2019, 08:08 PM ISTUpdated : Jan 18, 2022, 03:21 PM IST
ಮೋದಿ 6 ಸಾವಿರ ರೂ.+ ಬಿಎಸ್’ವೈ 4 ಸಾವಿರ ರೂ.= ರೈತರಿಗೆ 10 ಸಾವಿರ ರೂ.!

ಸಾರಾಂಶ

ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ|  2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ| 

ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ ಹಾಗೂ ನೇಕಾರ ಸಮುದಾಯಕ್ಕೆ ಭರ್ಜರಿ ಯೋಜನೆ ಘೋಷಿಸಿದ್ದಾರೆ.

ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ವಯ ರೈತರಿಗೆ ದೊರೆಯುತ್ತಿದ್ದ ವಾರ್ಷಿಕ 6 ಸಾವಿರ ರೂ.ಗೆ ರಾಜ್ಯ ಸರ್ಕಾರ 4 ಸಾವಿರ ರೂ. ಅಧಿಕವಾಗಿ ಕೊಡಲಿದೆ. ಅಂದರೆ ರಾಜ್ಯದ ರೈತ ಈ ಯೋಜನೆಯಡಿ ವಾರ್ಷಿಕವಾಗಿ ಒಟ್ಟು 10 ಸಾವಿರ ರೂ. ಸಿಗಲಿದೆ.

ರಾಜ್ಯ ಸರ್ಕಾರ ಕೊಡಮಾಡುವ 4 ಸಾವಿರ ರೂ. ಅನ್ನು ಎರಡು ಕಂತುಗಳಲ್ಲಿ ರೈತರಿಗೆ ಸಂದಾಯ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಮೂಲಕ ರೈತರಿಗೆ ಕೇಂದ್ರದ 6 ಸಾವಿರ ರೂ. ಹಾಗೂ ರಾಜ್ಯದ 4 ಸಾವಿರ ರೂ.  ಸೇರಿದಂತೆ ಒಟ್ಟು 10 ಸಾವಿರ ರೂ. ಸಿಗಲಿದೆ.

"

ನೇಕಾರ ಸಮುದಾಯಕ್ಕೆ ಬಂಪರ್:

ಇದೇ ವೇಳೆ ರಾಜ್ಯದ ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಣೆ ಮಾಡಿರುವ ಸಿಎಂ, ನೇಕಾರ ಸಮುದಾಯಕ್ಕೆ ಭರ್ಜರಿ ಕೊಡುಗೆ ಘೋಷಿಸಿದ್ದಾರೆ.  2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್‌ನಿಂದ ದೇಶ ಒಡೆಯಲು ಯತ್ನ, ರಾಹುಲ್ ಗಾಂಧಿ ವಿದೇಶಿ ಭೇಟಿ ಬಗ್ಗೆ ತನಿಖೆಯಾಗಲಿ: ಸಂಸದ ನಿಶಿಕಾಂತ್ ದುಬೆ
ಆರ್ಟ್ ಆಫ್ ಲಿವಿಂಗ್ ವಿರುದ್ಧ ಭೂ ಒತ್ತುವರಿ ಆರೋಪ, ರಾಜ್ಯ ಸರ್ಕಾರದಿಂದ ತನಿಖೆಗೆ SIT ರಚನೆ, ಸ್ವಾಗತಿಸಿದ ಸಂಸ್ಥೆ