ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಎಚ್ಡಿಕೆ ಸೂಪರ್ ಪ್ಲ್ಯಾನ್

Published : Jun 03, 2018, 10:51 AM ISTUpdated : Jun 03, 2018, 03:26 PM IST
ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಎಚ್ಡಿಕೆ ಸೂಪರ್ ಪ್ಲ್ಯಾನ್

ಸಾರಾಂಶ

ಸರಕಾರದ ಖಜಾನೆ ತುಂಬಲು ಇದೀಗ ಮುಖ್ಯಮಂತ್ರಿಗೆ ತುರ್ತು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದ್ದು, ದುಂದುವೆಚ್ಚ ಕಡಿವಾಣಕ್ಕೆ ಮುಂದಾಗಿದ್ದಾರೆ. ಅನಗತ್ಯ ಸರಕಾರ ಕಾರು ಖರೀದಿಸದಂತೆ ಆದೇಶಿಸಿರುವ ಎಚ್ಡಿಕೆ, ತುರ್ತು ಸಂದರ್ಭ ಹೊರತುಪಡಿಸಿ, ಬೇರೆ ವೇಳೆ ವಿಶೇಷ ವಿಮಾನದಲ್ಲಿ ಪ್ರಯಾಣಿಸದಂತೆಯೂ ನಿರ್ಧರಿಸಿದ್ದಾರೆ.

ಬೆಂಗಳೂರು: ಆರ್ಥಿಕ ಸೋರಿಕೆ ತಡೆಗಟ್ಟಲು ಮುಂದಾಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿ  ನಿಗಮ ಮಂಡಳಿ ಹಾಗೂ ಸರಕಾರದ ನಾನಾ ಇಲಾಖೆಗಳಲ್ಲಿ ಇನ್ನು ಮುಂದೆ  ಕಾರು ಖರೀದಿಸುವಂತಿಲ್ಲ, ಎಂದೂ ಆದೇಶಿಸಿದ್ದಾರೆ.

ನಿಗಮ ಮಂಡಳಿಗಳಲ್ಲಿ ಕಾರುಗಳ ಖರೀದಿಗೆ ನಿರ್ಬಂಧ ಹೇರಿದ ಸಿಎಂ, ಸಚಿವರ ಮನೆ, ಕೊಠಡಿ ನವೀಕರಣದ ಹೆಸರಲ್ಲಿ ದುಂದುವೆಚ್ಚಕ್ಕೆ ಕಡಿವಾಣ ಹಾಕಿದ್ದು, ಮಿತಿಯೊಳಗೆ ನವೀಕರಿಸಲು ಸೂಚಿಸಿದ್ದಾರೆ. 

ಸಿಎಂ ಬೆಂಗಾವಲು ಪಡೆಯಲ್ಲಿ ಅಗತ್ಯಕ್ಕಿಂತ ಹೆಚ್ಚು ವಾಹನಗಳ ಬಳಕೆಗೆ ಕಡಿವಾಣ ಹಾಕಲು ಚಿಂತಿಸುತ್ತಿದ್ದಾರೆ. ಈ ಸಂಬಂಧ ಉನ್ನತ ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ನಡೆಸಲಿರುವ ಸಿಎಂ, ರಾಜ್ಯದಿಂದ ಹೊರ ಹೋಗುವಾಗ ವಿಶೇಷ ವಿಮಾನ ಬಳಸದಂತೆಯೂ ನಿರ್ಧರಿಸಿದ್ದಾರೆ. ತುರ್ತು ಸಂಧರ್ಭದಲ್ಲಿ ಮಾತ್ರ ವಿಶೇಷ ವಿಮಾನ ಬಳಸುವುದಾಗಿ ಹೇಳಿದ್ದಾರೆ.

"

ವಾರದಿಂದ ಸಂಪುಟ ವಿಸ್ತರಣೆ ಸರ್ಕಸ್‌ನಲ್ಲಿ ಬ್ಯುಸಿಯಾಗಿದ್ದ ಕುಮಾರಸ್ವಾಮಿ, ಯಾವುದೇ ಅಧಿಕೃತ ಕಾರ್ಯಕ್ರಮಗಳಿಲ್ಲದ ಕಾರಣ ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ