ಸರಕಾರದ ಖಜಾನೆ ತುಂಬಲು ಇದೀಗ ಮುಖ್ಯಮಂತ್ರಿಗೆ ತುರ್ತು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದ್ದು, ದುಂದುವೆಚ್ಚ ಕಡಿವಾಣಕ್ಕೆ ಮುಂದಾಗಿದ್ದಾರೆ. ಅನಗತ್ಯ ಸರಕಾರ ಕಾರು ಖರೀದಿಸದಂತೆ ಆದೇಶಿಸಿರುವ ಎಚ್ಡಿಕೆ, ತುರ್ತು ಸಂದರ್ಭ ಹೊರತುಪಡಿಸಿ, ಬೇರೆ ವೇಳೆ ವಿಶೇಷ ವಿಮಾನದಲ್ಲಿ ಪ್ರಯಾಣಿಸದಂತೆಯೂ ನಿರ್ಧರಿಸಿದ್ದಾರೆ.