
ಚಿಕ್ಕಮಗಳೂರು : ಧಾರಾವಾಹಿ ಚತ್ರೀಕರಣದ ಬಾಡಿಗೆ ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸುದೀಪ್ ವಿರುದ್ಧ ಸಮನ್ಸ್ ಜಾರಿ ಮಾಡಲಾಗಿದೆ. ವಾರಸ್ದಾರಾ ಧಾರಾವಾಹಿಗೆ ಮನೆ ಪಡೆದು ಬಾಡಿಗೆ ನೀಡದ ಪ್ರಕರಣ ಸಂಬಂಧ ಚಿಕ್ಕಮಗಳೂರು JMFC ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದೆ.
ದೀಪಕ್ ಮಯೂರ್ ಎಂಬುವವರು ನೀಡಿದ ದೂರಿನ ಸಂಬಂಧ ಕೋರ್ಟ್ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಸಮನ್ಸ್ ನೀಡಲಾಗಿದೆ.
ನಟ ಸುದೀಪ್ ನಿರ್ಮಾಣದ ವಾರಸ್ದಾರ ಧಾರಾವಾಹಿ ಚಿತ್ರೀಕರಣಕ್ಕೆ ದೀಪಕ್ ಮಯೂರ್ ಎನ್ನುವವರು ಮನೆ, ತೋಟ ಬಾಡಿಗೆ ನೀಡಿದ್ದರು. ಈ ವೇಳೆ ತೋಟ ಹಾಗೂ ಮನೆ ನಾಶ ಮಾಡಿದ್ದಾರೆ. ಅಲ್ಲದೇ ಬಾಡಿಗೆ ಹಣ ನೀಡಿಲ್ಲ ಎಂದು ದೀಪಕ್ ದೂರು ನೀಡಿದ್ದರು.
ಈ ಪ್ರಕರಣ ಸಂಬಂಧ ನಡೆದ ವಿಚಾರಣೆಗೆ ಚಿಕ್ಕಮಗಳೂರು JMFC ನ್ಯಾಯಾಲಯಕ್ಕೆ ನಟ ಸುದೀಪ್ ಗೈರಾಗಿದ್ದು, ಈ ನಿಟ್ಟಿನಲ್ಲಿ ಸಮನ್ಸ್ ನೀಡಲಾಗಿದೆ. ಅಲ್ಲದೇ ಇದೀಗ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ನಟ ಸುದೀಪ್ ಗೆ ಕೋರ್ಟ್ ಸಮನ್ಸ್ ನಲ್ಲಿ ತಿಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.