
ಚಿಕ್ಕಮಗಳೂರು(ಡಿ.6): ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಹುಲಿಗಳ ಹಾವಳಿಯಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.
ಮೂಡಿಗೆರೆ ಉದುಸೆ ಗ್ರಾಮದಲ್ಲಿ ಹುಲಿಗಳು ದಾಳಿ ನಡೆಸಿ, ಎರಡು ಹಸು, ಒಂದು ಕರು ಬಲಿ ಪಡೆದಿದೆ. ಹುಲಿ ದಾಳಿಯಿಂದಾಗಿ ಹೆದರಿದ ಚಕ್ಕೊಡಿಗೆ, ಹೆಗ್ಗರವಳ್ಳಿ, ದಿಣ್ಣೆಕೆರೆ ಸುತ್ತಲಿನ ಗ್ರಾಮಸ್ಥರು ಮನೆಯಿಂದಲೇ ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ.
ನಾಲ್ಕು ದಿನಗಳ ಹಿಂದೆ ಬೇಟೆಯಾಡಿರೋ ಹಸುವನ್ನು ಮತ್ತೆ ಬೇರೆಡೆಗೆ ಹೊತ್ತೊಯ್ದಿದಿರುವುದು ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ. ಇಷ್ಟೆಲ್ಲಾ ಆದ್ರೂ ಈ ವರೆಗೆ ಭೇಟಿ ನೀಡದ ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.