ಲೋಕಸಭಾ ಚುನಾವಣೆ ಬೆನ್ನಲ್ಲೇ ಏನಿದು ಸಿ.ಟಿ.ರವಿ ಈ ಹೇಳಿಕೆ?

Published : Dec 08, 2018, 11:25 AM IST
ಲೋಕಸಭಾ ಚುನಾವಣೆ ಬೆನ್ನಲ್ಲೇ ಏನಿದು ಸಿ.ಟಿ.ರವಿ ಈ ಹೇಳಿಕೆ?

ಸಾರಾಂಶ

ಇನ್ನೇನು ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. 

ಹಾಸನ: ಮುಂದಿನ ಲೋಕಸಭೆ ಚುನಾವಣೆಗೆ ಹಾಸನ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಪಕ್ಷದ ವರಿಷ್ಠರು ಸೂಚನೆ ನೀಡಿದರೆ ಖಂಡಿತ ಸ್ಪರ್ಧಿಸುವುದಾಗಿ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ. 

ಈ ಕ್ಷೇತ್ರದ ಹಾಲಿ ಸಂಸದರಾಗಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಮುಂದಿನ ಬಾರಿ ಸ್ಪರ್ಧಿಸುತ್ತಾರೋ ಇಲ್ಲವೋ ಎಂಬ ಕುತೂಹಲ ಮನೆ ಮಾಡಿರುವ ಸಂದರ್ಭದಲ್ಲೇ ಸಿ.ಟಿ.ರವಿಯವರ ಈ ಹೇಳಿಕೆ ಅಚ್ಚರಿಗೆ ಕಾರಣವಾಗಿದೆ.

ನಗರದಲ್ಲಿ ಶುಕ್ರವಾರ ನಡೆದ ಬಿಜೆಪಿ ಜಿಲ್ಲಾ ಕಾರ್ಯಕರ್ತರ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಪಕ್ಷವು ನನಗೆ ಉತ್ತಮ ಸ್ಥಾನ ಮಾನವನ್ನು ನೀಡಿದೆ. ಆದರೆ ಪಕ್ಷದ ಬಲವರ್ಧನೆಗಾಗಿ ವರಿಷ್ಠರು ಹಾಸನ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಸೂಚಿಸಿದರೆ ಖಂಡಿತ ಕಣಕ್ಕಿಳಿಯುತ್ತೇನೆ ಎಂದರು. 

ಇದೇವೇಳೆ ಮುಖ್ಯಮಂತ್ರಿ ಕುಮರಸ್ವಾಮಿ ಅವರ ಟೆಂಪಲ್‌ ರನ್‌ ಅನ್ನೂ ತರಾಟೆಗೆ ತೆಗೆದುಕೊಂಡ ಅವರು, ಮುಖ್ಯಮಂತ್ರಿಯವರು ರಾಜ್ಯದ ಅಭಿವೃದ್ಧಿ ಕಾರ್ಯಗಳತ್ತ ಗಮನ ಕೊಡದೆ ದೇವಸ್ಥಾನಗಳನ್ನು ಸುತ್ತುತ್ತಿದ್ದಾರೆ. ದೇವರ ಮೇಲೆ ನಂಬಿಕೆ ಇರಬೇಕು ಆದರೆ ಇಷ್ಟೊಂದು ಇರಬಾರದು ಎಂದು ಟೀಕಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಲಲಿತಮ್ಮ
ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?