ಆ. 1 ರಂದೇ ವೇತನ ನೀಡಿ ನೌಕರರ ಪರ ನಿಂತ ಸಿದ್ಧಾರ್ಥ್ ಸಂಸ್ಥೆ

Published : Aug 04, 2019, 08:55 AM ISTUpdated : Aug 08, 2019, 05:48 PM IST
ಆ. 1 ರಂದೇ ವೇತನ ನೀಡಿ ನೌಕರರ ಪರ ನಿಂತ ಸಿದ್ಧಾರ್ಥ್ ಸಂಸ್ಥೆ

ಸಾರಾಂಶ

ಸಿದ್ಧಾರ್ಥ್ ಸಾವಿನಿಂದ ಅವರ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ನೌಕರರು ವೇತನದ ಬಗ್ಗೆ ಆತಂಕಗೊಂಡಿದ್ದರು. ಆ. 1 ರಂದೇ ಎಬಿಸಿ ಸಂಸ್ಥೆಯ ನೌಕರರಿಗೆ ವೇತನ ನೀಡಲಾಗಿದೆ. 

ಚಿಕ್ಕಮಗಳೂರು (ಆ. 04): ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ ಹೆಗ್ಡೆ ಮೃತಪಟ್ಟಿರುವುದು ಅವರ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ನೌಕರರಲ್ಲಿ ಮುಂದೇನು ಎಂಬ ಪ್ರಶ್ನೆ ಹುಟ್ಟುಹಾಕಿತ್ತು. ಆದರೆ, ಸಂಸ್ಥೆಯವರು ಆ.1 ರಂದೇ ವೇತನ ನೀಡುವ ಮೂಲಕ ನೌಕರರಲ್ಲಿ ಭದ್ರತೆಯ ಭಾವನೆ ಮೂಡಿಸಿದ್ದಾರೆ.

ಮಂಗಳೂರು: ನೇತ್ರಾವತಿ ಸೇತುವೆಗೆ ಸಿಸಿ ಟಿವಿ ಅಳವಡಿಕೆ

ಚಿಕ್ಕಮಗಳೂರಿನ ಎಬಿಸಿ ಸಂಸ್ಥೆಯಲ್ಲಿ ಕೆಲಸ ಮಾಡುವ ನೌಕರರಿಗೆ ಪ್ರತಿ ತಿಂಗಳು 5ನೇ ತಾರೀಖಿನಂದು ವೇತನ ನೀಡಲಾಗುತ್ತಿತ್ತು. ಅಲ್ಲದೆ, ಸಿದ್ಧಾರ್ಥ ಹೆಗ್ಡೆ ಅವರ ಮೂಡಿಗೆರೆ ತಾಲೂಕಿನ ಚೇತನಹಳ್ಳಿ ಎಸ್ಟೇಟ್‌ನ ಮನೆಯಲ್ಲಿ ಶನಿವಾರ ಐದನೇ ದಿನದ ವಿಧಿ ವಿಧಾನ ಕಾರ್ಯಗಳು ನಡೆದವು. ಸಿದ್ಧಾರ್ಥ ಅವರ ತಾಯಿ ವಾಸಂತಿ ಹೆಗ್ಡೆ, ಪತ್ನಿ ಮಾಳವಿಕ, ಪುತ್ರರಾದ ಅಮತ್ರ್ಯ, ಈಶಾನ್‌, ಕುಟುಂಬಸ್ಥರು ಮತ್ತು ಸಂಬಂಧಿಕರು ಭಾಗವಹಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು