
ನವದೆಹಲಿ (ಡಿ.13): ಅತ್ಯಾಚಾರದಿಂದ ಹುಟ್ಟಿದ ಮಗು ಪರಿಹಾರಕ್ಕೆ ಅರ್ಹವಾಗಿದ್ದು ತಾಯಿ ಹಾಗೂ ಮಗು ಇಬ್ಬರಿಗೂ ಪರಿಹಾರವನ್ನು ನೀಡಬೇಕು ಎಂದು ದೆಹಲಿ ನ್ಯಾಯಾಲಯ ಆದೇಶಿಸಿದೆ.
ತಂದೆಯೊಬ್ಬ ಅಪ್ರಾಪ್ತ ತನ್ನ ಮಲಮಗಳ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ವಿಚಾರಣೆ ನಡೆಸಿ ಈ ತೀರ್ಪು ನೀಡಿದೆ.
ಅತ್ಯಾಚಾರಕ್ಕೆ ಒಳಪಟ್ಟ ಅಪ್ರಾಪ್ತೆ ಅಥವಾ ವಯಸ್ಕ ಹೆಣ್ಣುಮಗಳಿಗೆ ಮಗು ಹುಟ್ಟಿದರೆ ಆ ಮಗು ಪರಿಹಾರಕ್ಕೆ ಅರ್ಹವಾಗಿದ್ದು, ಮಗು ಹಾಗೂ ತಾಯಿ ಇಬ್ಬರಿಗೂ ಪರಿಹಾರವನ್ನು ನೀಡಬೇಕು ಎಂದು ನ್ಯಾ.ಗೀತಾ ಮಿತ್ತಲ್ ಮತ್ತು ಆರ್,ಕೆ ಗೌಬಾ ಪೀಠವು
ಸ್ಪಷ್ಟವಾಗಿ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.