
ಕೊಪ್ಪಳ (ಜ.21): ಖಾಸಗಿ ವೈದ್ಯನ ಯಡವಟ್ಟಿನಿಂದಾಗಿ ಶಾಲಾ ಬಾಲಕಿಯೊಬ್ಬಳು ಬಲಿಯಾಗಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಇಲ್ಲಿನ ಗಂಗಾವತಿ ನಗರದ ಗಾಯಿತ್ರಿ ಜ್ವರದಿಂದ ಬಳಲುತ್ತಿದ್ದ ಕಾರಣ ಡಾ, ಸಂತೋಷ್ ಕುಮಾರ್ ಎಂಬ ವೈದ್ಯನ ಬಳಿ ಹೋಗಿದ್ದಾರೆ. ಆದರೆ ವೈದ್ಯ ಕೊಟ್ಟ ಮೆಡಿಸಿನ್ ರಿಯಾಕ್ಷನ್ ಆಗಿದೆ. ಬಾಲಕಿಗೆ ಚುಚ್ಚುಮದ್ದು ಕೊಟ್ಟ ಭಾಗ ನೀಲಿ ಬಣ್ಣಕ್ಕೆ ತಿರುಗಿ ಬಾವು ಕಾಣಿಸಿಕೊಂಡಿದೆ. ನಂತರ ಬಾಲಕಿ ಮೃತಪಟ್ಟಿದ್ದಾಳೆ. ವೈದ್ಯನ ನಿರ್ಲಕ್ಷ್ಯ ದಿಂದ ಬಾಲಕಿ ಮೃತಪಟ್ಟಿದ್ದಾಳೆ ಎಂದು ಪೋಷಕರು ಆರೋಪಿಸುತ್ತಿದ್ದು, ಗಂಗಾವತಿ ನಗರ ಠಾಣಾಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.