10 ವರ್ಷದಲ್ಲಿ ಭಾರತದಲ್ಲಿ ಬಾಲ್ಯ ವಿವಾಹ ಪ್ರಮಾಣ ಶೇ.20ರಷ್ಟುಇಳಿಕೆ: ವಿಶ್ವಸಂಸ್ಥೆ

Published : Mar 07, 2018, 09:54 AM ISTUpdated : Apr 11, 2018, 01:07 PM IST
10 ವರ್ಷದಲ್ಲಿ ಭಾರತದಲ್ಲಿ ಬಾಲ್ಯ ವಿವಾಹ ಪ್ರಮಾಣ ಶೇ.20ರಷ್ಟುಇಳಿಕೆ: ವಿಶ್ವಸಂಸ್ಥೆ

ಸಾರಾಂಶ

ದೇಶದಲ್ಲಿ ಸಾಕ್ಷರತೆ ಸೇರಿದಂತೆ ಇನ್ನಿತರ ಪರಿಣಾಮ ಕಳೆದ 10 ವರ್ಷಗಳಲ್ಲಿ ಬಾಲ್ಯ ವಿವಾಹಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ವಿಶ್ವಸಂಸ್ಥೆಯ ಅಂತಾರಾಷ್ಟ್ರೀಯ ಮಕ್ಕಳ ಶಿಕ್ಷಣ ನಿಧಿ(ಯುನಿಸೆಫ್‌) ಪ್ರಶಂಸೆ ವ್ಯಕ್ತಪಡಿಸಿದೆ. ಹೆಣ್ಣು ಮಕ್ಕಳಿಗೆ ಶಿಕ್ಷಣ, ಬಾಲ್ಯ ವಿವಾಹದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ, ಮಹಿಳೆಯರ ಪರವಾಗಿನ ಸರ್ಕಾರದ ಯೋಜನೆಗಳು ಸೇರಿದಂತೆ ಇತರ ಕಾರಣಗಳಿಂದಾಗಿ ಬಾಲ್ಯ ವಿವಾಹಗಳು ಪ್ರಮಾಣ ತಗ್ಗಿದೆ ಎಂದು ವಿಶ್ವಸಂಸ್ಥೆ ಪ್ರತಿಪಾದಿಸಿದೆ.

ನವದೆಹಲಿ: ದೇಶದಲ್ಲಿ ಸಾಕ್ಷರತೆ ಸೇರಿದಂತೆ ಇನ್ನಿತರ ಪರಿಣಾಮ ಕಳೆದ 10 ವರ್ಷಗಳಲ್ಲಿ ಬಾಲ್ಯ ವಿವಾಹಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ವಿಶ್ವಸಂಸ್ಥೆಯ ಅಂತಾರಾಷ್ಟ್ರೀಯ ಮಕ್ಕಳ ಶಿಕ್ಷಣ ನಿಧಿ(ಯುನಿಸೆಫ್‌) ಪ್ರಶಂಸೆ ವ್ಯಕ್ತಪಡಿಸಿದೆ. ಹೆಣ್ಣು ಮಕ್ಕಳಿಗೆ ಶಿಕ್ಷಣ, ಬಾಲ್ಯ ವಿವಾಹದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ, ಮಹಿಳೆಯರ ಪರವಾಗಿನ ಸರ್ಕಾರದ ಯೋಜನೆಗಳು ಸೇರಿದಂತೆ ಇತರ ಕಾರಣಗಳಿಂದಾಗಿ ಬಾಲ್ಯ ವಿವಾಹಗಳು ಪ್ರಮಾಣ ತಗ್ಗಿದೆ ಎಂದು ವಿಶ್ವಸಂಸ್ಥೆ ಪ್ರತಿಪಾದಿಸಿದೆ.

ಹತ್ತು ವರ್ಷಗಳ ಹಿಂದೆ 18 ವರ್ಷದೊಳಗಿನವರ ಪೈಕಿ ಶೇ.47ರಷ್ಟುಹೆಣ್ಣು ಮಕ್ಕಳು ಬಾಲ್ಯ ವಿವಾಹಕ್ಕೆ ಗುರಿಯಾಗುತ್ತಿದ್ದರು. ಆದರೆ, ಇದೀಗ ಈ ಪ್ರಮಾಣ ಶೇ.27ಕ್ಕೆ ಕುಸಿದಿದೆ ಎಂದು ಯುನಿಸೆಫ್‌ ಹೇಳಿದೆ. ಈ ಕುರಿತು ಮಂಗಳವಾರ ಯುನಿಸೆಫ್‌ ಹೊರಡಿಸಿದ ಪ್ರಕಟಣೆ ಪ್ರಕಾರ, ಜಾಗತಿಕವಾಗಿ ಕಳೆದ ಹತ್ತು ವರ್ಷ(2005-06ರಿಂದ 2015-2016ವರೆಗೆ)ಗಳಲ್ಲಿ 2.5 ಕೋಟಿ ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. ಇದರಲ್ಲಿ ಭಾರತದಲ್ಲೇ ಅತಿಹೆಚ್ಚು ಬಾಲ್ಯ ವಿವಾಹಗಳು ತಹಬದಿಗೆ ಬಂದಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಬಾಲ್ಯ ವಿವಾಹದ ಪರಿಣಾಮವಾಗಿ ಬಾಲಕಿಯರು ತಮ್ಮ ಜೀವಿತಾವಧಿಯಲ್ಲಿ ಅನಾರೋಗ್ಯ, ಆರ್ಥಿಕ ದೌರ್ಬಲ್ಯ, ಪತಿ ಮತ್ತು ಅತ್ತೆ-ಮಾವನಿಂದ ಕಿರುಕುಳ, ಕೌಟುಂಬಿಕ ವಿಘಟನೆ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಅಲ್ಲದೆ, ಹಿಂದಿನಿಂದಲೂ ಬಳುವಳಿಯಾಗಿ ಬರುವ ಬಡತನವೇ ಅವರ ಸಂಪತ್ತಾಗಿರುತಿತ್ತು ಎಂದು ಯುನಿಸೆಫ್‌ನ ಅಂಜು ಮಲ್ಹೋತ್ರಾ ಅವರು ಅಭಿಪ್ರಾಯಪಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಲ್ಯಾಣ ಕರ್ನಾಟಕ ನಾಡು ಈಗ ಗಾಂಜಾ ನೆಲೆವೀಡು: ನಶೆಯಲ್ಲಿ ತೇಲುತ್ತಿರೋ ಯುವ ಜನಾಂಗ
ದುಡಿಯುವ ಮಹಿಳೆಗೆ ಪತಿ ಜೀವನಾಂಶ ಕೊಡಬೇಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು