
ಯಾದಗಿರಿ (ಜ. 12): ಮಾನಸಿಕ ಅಸ್ವಸ್ಥ ಎನ್ನಲಾದ ವ್ಯಕ್ತಿಯಿಂದ ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ನಡೆದಿರುವ ಘಟನೆ ಇಲ್ಲಿನ ಕೊಯಿಲೂರ ಗ್ರಾಮದಲ್ಲಿ ನಡೆದಿದೆ.
ಹನುಮಂತ ಎಂಬಾತ ಆಟವಾಡುತ್ತಿದ್ದ ಮಕ್ಕಳನ್ನು ಅಟ್ಟಾಡಿಸಿ ಕೊಡಲಿಯಿಂದ ಹೊಡೆದು ಹಲ್ಲೆ ನಡೆಸಿದ್ದಾನೆ. ನಾಲ್ವರು ಮಕ್ಕಳಿಗೆ ಕೊಡಲಿಯಿಂದ ಹೊಡೆದು ಗಾಯ ಮಾಡಿದ್ದಾನೆ. ಬಿಡಿಸಲು ಹೋದ ಬಸವಂತರಾಯನ (30) ಮೇಲೂ ಹಲ್ಲೆ ನಡೆದಿದೆ.
ಮಹೇಶ, ವೆಂಕಟೇಶ, ಭೀಮರಾಯ, ಪರಶುರಾಮ ಎನ್ನುವ ಮಕ್ಕಳಿಗೆ ಗಾಯವಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹೇಶ್ ಗೆ ಗಂಭೀರ ಗಾಯಗಳಾಗಿದ್ದು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
-ಸಾಂದರ್ಭಿಕ ಚಿತ್ರ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.