
ಲಕ್ನೋ(ಸೆ. 04): ಉತ್ತರ ಪ್ರದೇಶದಲ್ಲಿ ಮಕ್ಕಳು ಮರಣಮೃದಂಗ ಮುಂದುವರಿದಿದೆ. ಗೋರಖ್'ಪುರ ಸರ್ಕಾರಿ ಆಸ್ಪತ್ರೆಯಲ್ಲಿ 63 ಮಕ್ಕಳ ಸರಣಿ ಸಾವಿನ ದುರಂತದ ನೋವು ಮರೆಯುವ ಮುನ್ನವೇ ರಾಜ್ಯದ ಮತ್ತೊಂದು ಸರಕಾರೀ ಆಸ್ಪತ್ರೆಯಲ್ಲಿ ಮಕ್ಕಳು ಸಾಲುಸಾಲಾಗಿ ಮರಣ ಹೊಂದಿರುವ ಘಟನೆ ಬೆಳಕಿಗೆ ಬಂದಿದೆ. ಫಾರೂಕಾಬಾದ್ ಜಿಲ್ಲೆಯ ಸರಕಾರಿ ಆಸ್ಪತ್ರೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ 49 ಹಸುಗೂಸುಗಳು ಮೃತಪಟ್ಟಿವೆ. ಆಕ್ಸಿಜನ್ ಪ್ರಮಾಣ ಕಡಿಮೆ ಇದ್ದದ್ದೇ ಈ ದುರಂತಕ್ಕೆ ಕಾರಣ ಎಂಬ ವಿಷಯವು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಫಾರೂಖಾಬಾದ್ ಜಿಲ್ಲಾ ಮ್ಯಾಜಿಸ್ಟ್ರೇಟ್ ರವೀಂದ್ರಕುಮಾರ್ ಅವರು ತನಿಖೆಗೆ ಆದೇಶಿಸಿದ್ದಾರೆ. ಆಕ್ಸಿಜನ್ ವ್ಯವಸ್ಥೆ ಸಮರ್ಪಕರವಾಗಿರುವುದನ್ನು ಖಾತ್ರಿಪಡಿಸಿಕೊಳ್ಳಲು ವಿಫಲರಾದ ಮುಖ್ಯ ವೈದ್ಯಾಧಿಕಾರಿ ಹಾಗೂ ಮುಖ್ಯ ವೈದ್ಯಕೀಯ ಅಭಿಯಂತರರ ವಿರುದ್ಧ ಪೊಲೀಸರು ಎಫ್'ಐಆರ್ ದಾಖಲಿಸಿದ್ದಾರೆ.
ಉತ್ತರಪ್ರದೇಶ ಮುಖ್ಯಂತ್ರಿ ಯೋಗಿ ಆದಿತ್ಯನಾಥ್ ಅವರ ಮೇಲೆ ಇನ್ನಷ್ಟು ಒತ್ತಡ ಬಿದ್ದಂತಾಗಿದೆ. ಗೋರಖ್'ಪುರದ ಬಿಆರ್'ಡಿ ಆಸ್ಪತ್ರೆಯಲ್ಲಿ 63 ಹಸುಳೆಗಳು ಮೃತಪಟ್ಟಿದ್ದವು. ಅಲ್ಲಿಯೂ ಕೂಡ ಆಮ್ಲಜನಕದ ಕೊರತೆಯೇ ಈ ದುರಂತಕ್ಕೆ ಕಾರಣವಾಗಿತ್ತು. ಆಕ್ಸಿಜನ್'ನ ಪೂರೈಕೆದಾರರು ತಮಗೆ ಬರಬೇಕಾದ ಬಾಕಿ ಹಣ ಬಂದಿಲ್ಲವೆಂದು ಅನೇಕ ಬಾರಿ ಆಸ್ಪತ್ರೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಇದಕ್ಕೆ ಯಾರೂ ತಲೆಕೆಡಿಸಿಕೊಂಡಿರಲಿಲ್ಲ. ಆನಂತರ ಆಕ್ಸಿಜನ್ ಪೂರೈಕೆ ನಿಂತು ಹೋಗಿತ್ತು. ಇದು ಮಕ್ಕಳ ಸಾವಿಗೆ ಮರಣಮೃದಂಗವಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.