
ಮೈಸೂರು(ಜೂ.24): ನಗರದಲ್ಲಿ ಹಾಡಹಗಲೇ ಮೂವರು ಮಕ್ಕಳ ಅಪಹರಣವಾಗಿದ್ದು, ಕೆಲವೇ ಗಂಟೆಯಲ್ಲಿ ಪತ್ತೆಯಾಗಿದ್ದಾರೆ.
ಯಾಸೀನ್, ಅನ್ನಾನ್, ಮುನ್ನಾನ್ ಅಪಹರಣವಾಗಿದ್ದ ಮಕ್ಕಳು. ಮನೆಮುಂದೆ ಆಟವಾಡುತ್ತಿದ್ದ ಮಕ್ಕಳನ್ನು ಪುಸಲಾಯಿಸಿ ಕಿಡ್ನ್ಯಾಪ್ ಮಾಡಲಾಗಿತ್ತು. ಅಪಹರಣಕಾರರು ಮೊದಲು ನಾಲ್ವರು ಮಕ್ಕಳನ್ನು ಅಪಹರಿಸಿದ್ದರು. ಇವರಲ್ಲಿ ರೆಹಾನ್ ಎಂಬಾತ ತಪ್ಪಿಸಿಕೊಂಡು ಅಪಹರಣದ ಬಗ್ಗೆ ಮಾಹಿತಿ ನೀಡಿದ್ದಾನೆ. ತದ ನಂತರ ಪೊಲೀಸರು ನಂಜನಗೂಡಿನಲ್ಲಿ ಮಕ್ಕಳನ್ನು ಪತ್ತೆ ಮಾಡಿದ್ದಾರೆ. ಪೋಷಕರು ತಮ್ಮ ಮಕ್ಕಳ ಜೊತೆ ಮಾತನಾಡಿದ್ದು, ಅಪಹರಣ ಸುಖಾಂತ್ಯಗೊಂಡಿದೆ. ಅಜೀಜ್ ಸೇಠ್ ನಗರ, ಶಾಂತಿನಗರ, ಗೌಸಿಯಾ ನಗರದವರಾಗಿದ್ದರು. ಅಪಹರಣಕಾರರ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ನಿರೀಕ್ಷಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.