ಮಕ್ಕಳ ಅಪಹರಣ ವದಂತಿ; ಕಂಗಾಲಾದ ಜನ

First Published May 14, 2018, 9:36 AM IST
Highlights

ಪಾವಗಡ ತಾಲೂಕಿನಲ್ಲಿ ಮಕ್ಕಳ ಅಪಹರಣ ವದಂತಿ ಹಬ್ಬಿದ್ದು  ಜನರು ಆತಂಕಕ್ಕೀಡಾಗಿದ್ದಾರೆ.  ಮಕ್ಕಳನ್ನು ಅಪಹರಣ ಮಾಡಿ ಅಂಗಾಂಗಳನ್ನು ಕದಿಯುತ್ತಾರೆಂಬ ವದಂತಿಯೊಂದು ಹಬ್ಬಿದ್ದು   ಪೋಷಕರು ರಾತ್ರಿಯಿಡಿ ನಿದ್ದೆಗೆಟ್ಟು ಮಕ್ಕಳನ್ನು ಕಾಯುತ್ತಿದ್ದಾರೆ. ಅಪರಿಚಿತರು ಗ್ರಾಮಕ್ಕೆ ಬರದಂತೆ ಕಾಯುತ್ತಿದ್ದಾರೆ. 

ಬೆಂಗಳೂರು (ಮೇ. 14):  ಪಾವಗಡ ತಾಲೂಕಿನಲ್ಲಿ ಮಕ್ಕಳ ಅಪಹರಣ ವದಂತಿ ಹಬ್ಬಿದ್ದು  ಜನರು ಆತಂಕಕ್ಕೀಡಾಗಿದ್ದಾರೆ.  

ಮಕ್ಕಳನ್ನು ಅಪಹರಣ ಮಾಡಿ ಅಂಗಾಂಗಳನ್ನು ಕದಿಯುತ್ತಾರೆಂಬ ವದಂತಿಯೊಂದು ಹಬ್ಬಿದ್ದು   ಪೋಷಕರು ರಾತ್ರಿಯಿಡಿ ನಿದ್ದೆಗೆಟ್ಟು ಮಕ್ಕಳನ್ನು ಕಾಯುತ್ತಿದ್ದಾರೆ. ಅಪರಿಚಿತರು ಗ್ರಾಮಕ್ಕೆ ಬರದಂತೆ ಕಾಯುತ್ತಿದ್ದಾರೆ. 
ನೆರೆಯ ಆಂಧ್ರದಿಂದ‌ ಮಕ್ಕಳ ಅಪಹರಣ ತಂಡ ಪಾವಗಡಕ್ಕೆ ಆಗಮಿಸಿದೆ.  ಕಿಡ್ನಿ, ಹೃದಯಕ್ಕಾಗಿ ಮಕ್ಕಳನ್ನು ದಾರುಣವಾಗಿ ಹತ್ಯೆಗೈಯುತ್ತಾರೆಂಬ ವದಂತಿ ವಾಟ್ಸಾಪ್, ಫೇಸ್ ಬುಕ್’ಗಳನ್ನು ಹರಡುತ್ತಿರುವುದನ್ನು ನೋಡಿ ಗ್ರಾಮಸ್ಥರು ಹೆದರಿದ್ದಾರೆ.  

ವದಂತಿಗೆ ಇನ್ನಷ್ಟು ಪುಷ್ಠಿ ನೀಡುವಂತೆ ನಿನ್ನೆ ರಾತ್ರಿ ಯುವತಿಯೊಬ್ಬಳು ಕಣ್ಮರೆಯಾಗಿದ್ದಾಳೆ.   ಬಹಿರ್ದೆಸೆಗೆ ತೆರಳಿದ್ದ ಪೊನ್ನಸಮುದ್ರ ಗ್ರಾಮದ ಯುವತಿ ನಾಪತ್ತೆಯಾಗಿದ್ದು ಜನರು ಇನ್ನಷ್ಟು ಕಂಗಾಲಾಗಿದ್ದಾರೆ.  ಪಳ್ಳವಳ್ಳಿ, ಪೊನ್ನಸಮುದ್ರ, ದೊಡ್ಡಹಳ್ಳಿ, ಕೆ.ರಾಂಪುರ ಸೇರಿದ್ದಂತೆ ಗಡಿ ಭಾಗದ ಹಳ್ಳಿಗಳಲ್ಲಿ ಜನರು ತಮ್ಮ ಮಕ್ಕಳನ್ನು ಹೊರಗೆ ಹೋಗಲು ಬಿಡುತ್ತಿಲ್ಲ. 

click me!