
ಬೀಜಿಂಗ್: ಮಂಗಳವಾರ ಸಾಮಾನ್ಯ ಹಾರಾಟದ ವೇಳೆ ನಾಪತ್ತೆಯಾಗಿದ್ದ ಭಾರತೀಯ ವಾಯುಪಡೆಗೆ ಸೇರಿದ ಸುಖೋಯ್ ಯುದ್ಧ ವಿಮಾನದ ಕುರಿತು ಇನ್ನೂ ಯಾವುದೇ ಸುಳಿವು ಸಿಕ್ಕಿಲ್ಲ.
ಈ ನಡುವೆ ವಿಮಾನ ಭಾರತ- ಚೀನಾ ಗಡಿಗೆ ಹೊಂದಿಕೊಂಡಿರುವ ಪ್ರದೇಶದಲ್ಲೇ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಇಡೀ ಘಟನೆಯ ಹಿಂದೆ ಚೀನಾ ಕೈವಾಡದ ಶಂಕೆಯೂ ವ್ಯಕ್ತವಾಗಿದೆ. ಬುಧವಾರ ಸುದ್ದಿಗಾರರು ಈ ಕುರಿತು ಕೇಳಿದ ಪ್ರಶ್ನೆಗೆ ‘ನೀವು ಹೇಳಿದಂತಹ ಪರಿಸ್ಥಿತಿಗೆ ಸಂಬಂಧಿಸಿದ ಸೂಕ್ತ ಮಾಹಿತಿ ಸದ್ಯಕ್ಕೆ ನನ್ನ ಬಳಿಯಿಲ್ಲ' ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಲೂ ಕಾಂಗ್ ಹೇಳಿದ್ದಾರೆ.
ಅಸ್ಸಾಂನ ತೇಜ್ಪುರ ನೆಲೆಯಿಂದ ಹಾರಾಟ ಆರಂಭಿಸಿದ್ದ ತರಬೇತಿ ವಿಮಾನದ ಪತ್ತೆಗಾಗಿ ಭಾರತಕ್ಕೆ ಚೀನಾ ನೆರವು ನೀಡುತ್ತಿದೆಯೇ? ಎಂದು ಕೇಳಲಾದ ಪ್ರಶ್ನೆಗೆ ಅವರು ಉತ್ತರಿಸಿದರು.
ಇದೇ ವೇಳೆ ‘ದಕ್ಷಿಣ ಟಿಬೆಟ್ (ಅರುಣಾಚಲ ಪ್ರದೇಶ)ದ ಪರಿಸ್ಥಿತಿಗಳ ಬಗ್ಗೆ ನಾವು ನಿಗಾವಿರಿಸಿದ್ದೇವೆ' ಎಂದಷ್ಟೇ ಅವರು ತಿಳಿಸಿದರು. ಕಾಣೆಯಾಗುವುದಕ್ಕೂ ಮೊದಲು ಈ ಪ್ರದೇಶದಲ್ಲಿ ವಿಮಾನ ಹಾರಾಟ ನಡೆಸಿತ್ತು ಎಂಬ ವರದಿಗಳನ್ನು ಉಲ್ಲೇಖಿಸಿ ಅವರು ಮಾತನಾಡಿದರು.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.