
ಬೀಜಿಂಗ್: ಅರುಣಾಚಲ ಪ್ರದೇಶಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಭೇಟಿ ನೀಡಿ ದ್ದಕ್ಕೆ ಚೀನಾ ಪ್ರಬಲವಾಗಿ ಆಕ್ಷೇಪಿಸಿದೆ. ದ್ವಿಪಕ್ಷೀಯ ಸಂಬಂಧದ ನಿರ್ಣಾಯಕ ಹಂತದಲ್ಲಿ ಭಾರತವು ಗಡಿ ವಿವಾದವನ್ನು ಜಟಿಲಗೊಳಿಸಬಾರದುಎಂದು ಚೀನಾ ಹೇಳಿದೆ.
ಆದರೆ, ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗವಾಗಿದ್ದು, ರಾಷ್ಟ್ರದ ನೇತಾರರು ಇತರೆ ಪ್ರದೇಶಗಳಿಗೆ ಭೇಟಿ ನೀಡಿದಂತೆಯೇ ಮುಕ್ತವಾಗಿ ಭೇಟಿ ನೀಡಿದ್ದಾರೆ.
ಇದರಲ್ಲಿ ಹೆಚ್ಚಿನ ವಿಶೇಷತೆ ಏನೂ ಇಲ್ಲ ಎಂದು ಭಾರತ ಹೇಳಿದೆ. ಈ ಮೂಲಕ ಅರುಣಾಚಲ ದಕ್ಷಿಣದ ಟಿಬೆಟ್ ಎಂದು ಪ್ರತಿಪಾದಿಸುವ ಚೀನಾ ವಾದವನ್ನು ಭಾರತ ಅಲ್ಲಗೆಳೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.