
ನವದೆಹಲಿ (ಫೆ.22): ಚೀನಾ-ಪಾಕ್ ನಡುವಿನ ಎಕನಾಮಿಕ್ ಕಾರಿಡಾರ್ ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ತರುತ್ತಿದ್ದು, ಚೀನಾ ಆಹ್ವಾನಿಸಿರುವ ಸಿಲ್ಕ್ ರೋಡ್ ಶೃಂಗಸಭೆಯಲ್ಲಿ ಭಾರತ ಭಾಗವಹಿಸುವುದು ಅನಿಶ್ಚಿತವಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಎಸ್. ಜೈಶಂಕರ್ ಹೇಳಿದ್ದಾರೆ.
ಸಿಲ್ಕ್ ರೋಡ್ ಶೃಂಗಸಭೆಯಲ್ಲಿ ಭಾಗವಹಿಸುವಂತೆ ಭಾರತಕ್ಕೆ ಆಹ್ವಾನ ಬಂದಿದೆ. ಇದನ್ನು ನಾವು ಪರಿಶೀಲಿಸುತ್ತಿದ್ದೇವೆ. ಚೀನಾ ಪಾಕಿಸ್ತಾನ ಎಕನಾಮಿಕ್ ಕಾರಿಡಾರ್ (ಸಿಪಿಇಸಿ) ಈ ಶೃಂಗಸಭೆಯ ಭಾಗವಾಗಿದೆ. ಇದು ಪಾಕ್ ಆಕ್ರಮಿತ ಕಾಶ್ಮೀರದ ಮೂಲಕ ಹಾದು ಹೋಗುವುದರಿಂದ ಭಾರತದ ಸಾರ್ವಭೌಮತೆಯನ್ನು ಉಲ್ಲಂಘಿಸುತ್ತದೆ ಎಂದು ವಿದೇಶಾಂಗ ಕಾರ್ಯದರ್ಶಿ ಎಸ್. ಜೈಶಂಕರ್ ಹೇಳಿದ್ದಾರೆ.
ದೇಶದ ಸಾರ್ವಭೌಮತ್ವದ ಬಗ್ಗೆ ಸೂಕ್ಷ್ಮ ಭಾವನೆಯನ್ನು ಹೊಂದಿರುವ ಚೀನಾಗೆ, ಇನ್ನೊಂದು ದೇಶದ ಸಾರ್ವಭೌಮತ್ವಕ್ಕೆ ಧಕ್ಕೆಯಾದಾಗ ಆಹ್ವಾನಕ್ಕೆ ಓಗೊಟ್ಟು ಬರಲು ಹೇಗೆ ಸಾಧ್ಯ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಜೈ ಶಂಕರ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.