
ಬೀಜಿಂಗ್: ಚೀನಾ, ಅಪರೂಪಕ್ಕೆ ಎಂಬಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದೆ. ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗದಲ್ಲಿ ಮೋದಿ ತಮ್ಮ ಭಾಷಣದಲ್ಲಿ ಆರ್ಥಿಕ ರಕ್ಷಣಾ ನೀತಿ ಭಯೋತ್ಪಾದನೆಯಷ್ಟೇ ಅಪಾಯಕಾರಿ ಎಂದು ಪ್ರತಿಪಾದಿಸಿದ್ದರು. ಅವರ ಈ ನಿಲುವನ್ನು ಚೀನಾ ಸ್ವಾಗತಿಸಿದೆ.
‘ಮೋದಿ ಅವರು ತಮ್ಮ ಭಾಷಣದಲ್ಲಿ ಆರ್ಥಿಕ ರಕ್ಷಣಾ ನೀತಿಯಿಂದಾಗುವ ಅಪಾಯದ ಬಗ್ಗೆ ವಿವರಿಸಿದ್ದಾರೆ. ಜಾಗತೀಕರಣ ಇಂದಿನ ಪ್ರವೃತ್ತಿ ಎಂದು ಅವರು ಪ್ರತಿಪಾದಿಸಿದ್ದಾರೆ. ಅಭಿವೃದ್ಧಿ ಹೊಂದಿದ ದೇಶಗಳೂ ಸೇರಿದಂತೆ ಎಲ್ಲಾ ದೇಶಗಳು ಆರ್ಥಿಕ ರಕ್ಷಣಾ ನೀತಿಯ ವಿರುದ್ಧ ಹೋರಾಡಬೇಕಿದೆ. ಈ ನಿಟ್ಟಿನಲ್ಲಿ ಚೀನಾ ಭಾರತದೊಂದಿಗೆ ಕಾರ್ಯನಿರ್ವಹಿಸಲು ಬಯಸುತ್ತದೆ ’ ಎಂದು ಚೀನಾ ವಿದೇಶಾಂಗ ಇಲಾಖೆ ವಕ್ತಾರೆ ಹುವಾಚುನೈಯಿಂಗ್ ತಿಳಿಸಿದ್ದಾರೆ.
ಜಾಗತೀಕರಣದ ಅತಿದೊಡ್ಡ ಪ್ರಯೋಜನವನ್ನು ಚೀನಾ ಪಡೆದುಕೊಳ್ಳುತ್ತಿದ್ದು, ಕಳೆದ ಮೂರು ದಶಕಗಳಿಂದ ವಿಶ್ವದ ಕಾರ್ಖಾನೆ ಎನಿಸಿಕೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.