
ಬೀಜಿಂಗ್(ಡಿ.12): ಪಾಕಿಸ್ತಾನ ಮೂಲದ ಉಗ್ರವಾದಿ ಮಸೂದ್ ಅಜರ್ ವಿಷಯದಲ್ಲಿ ತಮ್ಮ ನೀತಿಯಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ ಎಂದು ಚೀನಾ ಸ್ಪಷ್ಟಪಡಿಸಿದೆ.
ಈ ಮೂಲಕ ತಿಂಗಳಾಂತ್ಯದಲ್ಲಿ ವಿಶ್ವಸಂಸ್ಥೆಯಲ್ಲಿ ಜೆಇಎಂ ಮುಖ್ಯಸ್ಥನಿಗೆ ನಿಷೇಧ ಹೇರುವಂತೆ ಮಾಡುವ ಭಾರತದ ಯತ್ನಕ್ಕೆ ತಡೆಯೊಡ್ಡುವ ಚೀನಾದ ಪ್ರಯತ್ನ ಮುಂದುವರಿಯಲಿದೆ ಎಂಬ ಸ್ಪಷ್ಟ ಸಂದೇಶ ನೀಡಿದೆ. ಭಾರತ-ಚೀನಾ ಸಂಬಂಧ ಕುರಿತಂತೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಚೀನಾದ ವಿದೇಶಾಂಗ ಇಲಾಖೆಯ ವಕ್ತಾರ ಜೆಂಗ್ ಶುವಾಂಗ್ ಈ ವಿಷಯ ತಿಳಿಸಿದ್ದಾರೆ.
ಅಣ್ವಸ್ತ್ರ ಪೂರೈಕೆದಾರರ ಸಮೂಹ(ಎನ್ಎಸ್'ಜಿ)ಕ್ಕೆ ಭಾರತದ ಸೇರ್ಪಡೆ ವಿಷಯದಲ್ಲೂ ಚೀನಾದ ನಿಲುವು ಬದಲಾಗಿಲ್ಲ ಎಂಬ ಸುಳಿವನ್ನೂ ಜೆಂಗ್ ನೀಡಿದ್ದಾರೆ.
ಎನ್ಎಸ್'ಜಿ ಕುರಿತಂತೆ ನಾವು ರಾಜಕೀಯ ಮಾಡುವುದಿಲ್ಲ ಎಂದು ಕಳೆದ ವಾರ ದೆಹಲಿಯಲ್ಲಿ ಚೀನಾ ಚಿಂತಕರ ಚಾವಡಿ ಅಭಿಪ್ರಾಯಪಟ್ಟಿತ್ತು.
ಆದರೆ ಉಭಯ ರಾಷ್ಟ್ರಗಳ ಪರಸ್ಪರ ಸಹಕಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.