ಚಿಂಚೋಳಿ ಉಪಚುನಾವಣೆ: ಶಕ್ತಿ ಪ್ರದರ್ಶನಕ್ಕೆ ಬ್ರೇಕ್ ಹಾಕಿದ ಆಯೋಗ

Published : Apr 28, 2019, 07:51 PM IST
ಚಿಂಚೋಳಿ ಉಪಚುನಾವಣೆ: ಶಕ್ತಿ ಪ್ರದರ್ಶನಕ್ಕೆ ಬ್ರೇಕ್ ಹಾಕಿದ ಆಯೋಗ

ಸಾರಾಂಶ

ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಚಿಂಚೋಳಿ ವಿಧಾನಸಭೆ ಉಪಚುನಾವಣೆಯ ಕಾವು ರಂಗೇರಿದೆ. ಸೋಮವಾರ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದು, ಈ ವೇಳೆ ಶಕ್ತಿ ಪ್ರದರ್ಶನಕ್ಕೆ ಚುನಾವಣಾ ಆಯೋಗ ಬ್ರೇಕ್ ಹಾಕಿದೆ.

ಕಲಬುರಗಿ, [ಏ.28]: ಚಿಂಚೋಳಿ ವಿಧಾನಸಭಾ ಉಪಚುನಾವಣೆಯ ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 29 ಸೋಮವಾರ ಕೊನೆಯ ದಿನವಾಗಿದ್ದು, ನಾಳೆ [ಸೋಮವಾರ] ಬಿಜೆಪಿ ಹಾಗು ಕಾಂಗ್ರೆಸ್ ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿಸಲು ಸಜ್ಜಾಗಿದ್ದಾರೆ. 

ಆದ್ರೆ ನಾಮಪತ್ರ ಸಲ್ಲಿಸುವಾಗ ಮೆರವಣಿಗೆ, ರೋಡ್ ಶೋ, ಬೈಕ್ ರ್ಯಾಲಿಗಳಿಗೆ ನಿಷೇಧಿಸಲಾಗಿದೆ.  ನಾಮಪತ್ರ ಸಲ್ಲಿಸಲು ಸೋಮವಾರ ಕೊನೆ ದಿನವಾಗಿದ್ದರಿಂದ ಎಲ್ಲರು ಅಂದೇ ನಾಮಪತ್ರ ಸಲ್ಲಿಸಲಿದ್ದಾರೆ.  

ಚಿಂಚೋಳಿ ಟಿಕೆಟ್ ಫೈಟ್: ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಬಂಡಾಯ

ಇದ್ರಿಂದ ಚಿಂಚೋಳಿಯಲ್ಲಿ ಗದ್ದಲದಲ್ಲಿ ಅಹಿತಕರ ಘಟನೆಗಳು ನಡೆಯುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಮಪತ್ರ ಸಲ್ಲಿಸುವ ವೇಳೆ ಮೆರವಣಿಗೆ, ರ್ಯಾಲಿ ನಿಷೇಧಿಸಲಾಗಿದೆ.

ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೂ ಕರ್ನಾಟಕ ವಿಧಾನಸೌಧಕ್ಕೂ ನಿಗೂಢ ನಂಟು!

ಎಲ್ಲ ಪ್ರಮುಖ ಪಕ್ಷದವರು ಹಾಗೂ ಪಕ್ಷೆತರ ಅಭ್ಯರ್ಥಿಗಳು ಒಂದೇ ದಿನದಂದು ನಾಮಪತ್ರ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಚಿಂಚೋಳಿ ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಏಪ್ರಿಲ್  29 ಸೋಮವಾರದಂದು  ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಯಾವುದೇ ತರಹದ ಮೆರವಣಿಗೆ, ಪಾದಯಾತ್ರೆ, ಬೈಕ್ ರ್ಯಾಲಿ, ರೋಡ್ ಶೋಗಳನ್ನು ನಡೆಸಲು ಅನುಮತಿ ನಿರಾಕರಿಸಲಾಗಿದೆ ಎಂದು ಚಿಂಚೋಳಿ ವಿಧಾನಸಭಾ ಉಪ ಚುನಾವಣೆಯ ಚುನಾವಣಾಧಿಕಾರಿ ಸೋಮಶೇಖರ್ ಎಸ್. ಜಿ. ತಿಳಿಸಿದ್ದಾರೆ.

ಈ ಮೂಲಕ ನಾಮಪತ್ರ ಸಲ್ಲಿಸುವ ವೇಳೆ ಶಕ್ತಿ ಪ್ರದರ್ಶನ ಮಾಡಲು ಪ್ಲಾನ್ ಮಾಡಿದ್ದ ಕಾಂಗ್ರೆಸ್, ಬಿಜೆಪಿ ನಾಯಕರಿಗೆ ನಿರಾಸೆಯಾಗಿದೆ. ಕಾಂಗ್ರೆಸ್ ನಿಂದ ಸುಭಾಷ್ ರಾಥೋಡ್ ಹಾಗೂ ಬಿಜೆಪಿಯಿಂದ ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್ ಕಣಕ್ಕಿಳಿದಿದ್ದಾರೆ. ಇದೇ ಮೇ 19ರಂದು ಉಪಚುನಾವಣೆ ನಡೆಯಲಿದ್ದು, ಮೇ 23ಕ್ಕೆ ಫಲಿತಾಂಶ ಹೊರಬೀಳಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತದ ಈ ರೈಲಿನಲ್ಲಿ ಊಟಕ್ಕೆ ದುಡ್ಡೇ ಬೇಡ! ಇದು ಉಚಿತ ಊಟ ನೀಡುವ ದೇಶದ ಏಕೈಕ ರೈಲು, ನೀವು ಪ್ರಯಾಣಿಸಿದ್ದೀರಾ?
ಮನ್ರೆಗಾ ಹೆಸರು ಬದಲಿಸಲು ಇಚ್ಛಿಸಿದ ಮೋದಿ ಸರ್ಕಾರ, ಇನ್ಮುಂದೆ ಇದು VBGRAMG!