
ಕಲಬುರಗಿ : ಚಿಂಚೋಳಿ ಶಾಸಕ ಉಮೇಶ್ ಜಾದವ್ ಕಾಂಗ್ರೆಸ್ ತೊರೆದ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಬಿಜೆಪಿಯಿಂದ ಅಭ್ಯರ್ಥಿ ಫೈನಲ್ ಮಾಡಲಾಗಿದೆ.
ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಉಮೇಶ್ ಜಾಧವ್ ಪುತ್ರ ಡಾ. ಅವಿನಾಶ ಜಾಧವ್ ಗೆ ಬಿಜೆಪಿ ಟಿಕೆಟ್ ನೀಡಲು ನಿರ್ಧರಿಸಲಾಗಿದೆ.
ಇನ್ನು ಈ ಕ್ಷೇತ್ರದಲ್ಲಿ ಉಮೇಶ್ ಜಾಧವ್ ಸಹೋದರ ರಾಮಚಂದ್ರ ಜಾಧವ್ ಕೂಡ ಈ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದು, ವಿಧಾನಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಇದೀಗ ಸಹೋದರನ ಪುತ್ರನಿಗೆ ಬಿಜೆಪಿ ಟಿಕೆಟ್ ದೊರೆತಿದೆ.
ಈ ಬಗ್ಗೆ ಸ್ವತಃ ರಾಮಚಂದ್ರ ಜಾಧವ್ ಪ್ರತಿಕ್ರಿಯಿಸಿದ್ದು, ನನಗೆ ಬಿಜೆಪಿ ಟಿಕೆಟ್ ಕೊಡಲು ಮುಂದಾಗಿತ್ತು. ಆದರೆ ಅನಾರೋಗ್ಯದ ಕಾರಣ ನಾನೇ ನಿರಾಕರಿಸಿದೆ. ಇದರಿಂದ ಅವಿನಾಶ್ ಗೆ ಟಿಕೆಟ್ ದೊರೆತಿದೆ. ಇದರಿಂದ ಕುಟುಂಬದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ.
ಹಿಂದೆ ನನ್ನ ಸಹೋದರ ಉಮೇಶ ಜಾಧವ್ ಪರ ಯಾವ ರೀತಿ ಕೆಲಸ ಮಾಡಿದ್ದೇನೋ ಅದಕ್ಕಿಂತ ಹೆಚ್ಚು ಪುತ್ರ ಅವಿನಾಶ್ ಪರ ಕೆಲಸ ಮಾಡುತ್ತೇನೆ ಎಂದು ರಾಮಚಂದ್ರ ಜಾಧವ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.