ಸಹೋದ್ಯೋಗಿಗೆ ಲೈಂಗಿಕ ಕಿರುಕುಳ: ಚಿಂತಾಮಣಿ ನಗರಸಭೆ ಆಯುಕ್ತರ ಅಮಾನತು

Published : Aug 30, 2017, 07:45 AM ISTUpdated : Apr 11, 2018, 12:48 PM IST
ಸಹೋದ್ಯೋಗಿಗೆ ಲೈಂಗಿಕ ಕಿರುಕುಳ: ಚಿಂತಾಮಣಿ ನಗರಸಭೆ ಆಯುಕ್ತರ ಅಮಾನತು

ಸಾರಾಂಶ

* ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ * ಚಿಂತಾಮಣಿ ನಗರಸಭೆ ಆಯುಕ್ತರ ಅಮಾನತು * ಡಿಸಿ ದೀಪ್ತಿ ಆದಿತ್ಯಾ ಕಾನಡೆಯಿಂದ ಅಮಾನತು ಆದೇಶ * ಚಿಂತಾಮಣಿ ನಗರಸಭೆ ಆಯುಕ್ತ ಮುನಿಶಾಮಿ * ಪ್ರಭಾರ ಆಯುಕ್ತರಾಗಿ ಎನ್.ಭಾಸ್ಕರ್ ನೇಮಕ

ಚಿಕ್ಕಬಳ್ಳಾಪುರ(ಆ. 30): ಲೈಂಗಿಕ ಕಿರುಕುಳ ಆರೋಪದಡಿ ಚಿಂತಾಮಣಿ ನಗರಸಭೆ ಆಯುಕ್ತರನ್ನು ಅಮಾನತುಗೊಳಿಸಲಾಗಿದೆ. ಜಿಲ್ಲಾಧಿಕಾರಿ ದೀಪ್ತಿ ಆದಿತ್ಯಾ ಕಾನಡೆ ಅವರು ನಗರಸಭೆ ಆಯುಕ್ತರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಚಿಂತಾಮಣಿ ನಗರಸಭೆ ಆಯುಕ್ತ ಮುನಿಶಾಮಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆಂದು ಮಹಿಳಾ ಸಿಬ್ಬಂದಿಯೊಬ್ಬರು ದೂರು ನೀಡಿದ್ದರು. ಈ ದೂರಿನ ಅನ್ವಯ ವಿಚಾರಣೆ ನಡೆಸಿದ ಜಿಲ್ಲಾಧಿಕಾರಿ, ಆಯುಕ್ತ ಮುನಿಶಾಮಿ ಅವರನ್ನು ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.

ಈ ವೇಳೆ, ಜಿಲ್ಲಾ ಯೋಜನಾ ನಿರ್ದೇಶಕರಾದ ಎನ್. ಭಾಸ್ಕರ್ ಅವರನ್ನು ಚಿಂತಾಮಣಿಯ ಪ್ರಭಾರ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೆಹಂದಿ ಗಿಡ ಪೂಜಿಸಿದರೆ ಇಷ್ಟೆಲ್ಲಾ ಲಾಭವಿದೆಯೇ?: ಪೂಜೆಗೆ ಇದೇ ಸರಿಯಾದ ದಿನ!
Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!