
ಚಿತ್ರದುರ್ಗ: ಇಲ್ಲಿನ ಮಾಡದ ಕೆರೆ ಬಳಿ ಲಾರಿ ಪಲ್ಟಿಯಾಗಿ 8 ದನಗಳು ಸಾವನ್ನಪ್ಪಿವೆ. ಅಕ್ರಮವಾಗಿ ದನಗಳನ್ನು ಸಾಗಿಸುತ್ತಿದ್ದ ವೇಳೆ ಮರಕ್ಕೆ ಡಿಕ್ಕಿಯಾಗಿ ಬಿದ್ದಿರುವ ಲಾರಿ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಮಾಡದಕೆರೆ ಬಳಿ ಪೂರ್ತಿ ಮುಚ್ಚಿರುವ ಗೂಡ್ಸ್ ಲಾರಿಯಲ್ಲಿ ದನಗಳ ಸಾಗಣೆ ಮಾಡಲಾಗುತ್ತಿತ್ತು. ಈ ವೇಳೆ ಲಾರಿ ಮರಕ್ಕಡ ಡಿಕ್ಕಿಯಾಗಿ ಉರುಳಿ ಬಿದ್ದಿದೆ. ಈ ವೇಳೆ ವಿಚಾರ ತಿಳಿದ ಸ್ಥಳೀಯರು ದನಗಳ ರಕ್ಷಣೆಗೆ ಮುಂದಾಗಿದ್ದು, ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.
ಒಂದೇ ಲಾರಿಯಲ್ಲಿ ಹೆಚ್ಚಿನ ಸಂಖ್ಯೆ ದನಗಳನ್ನು ತುಂಬಲಾಗಿದ್ದು, ಈ ವೇಳೆ ಸ್ಥಳದಲ್ಲಿ 8ಕ್ಕೂ ಅಧಿಕ ದನಗಳು ಸಾವನ್ನಪ್ಪಿವೆ. ಲಾರಿಯಲ್ಲಿದ್ದ 22ಕ್ಕೂ ಅಧಿಕ ದನಗಳನ್ನು ರಕ್ಷಣೆ ಮಾಡಲಾಗಿದೆ.
ಸ್ಥಳದಲ್ಲಿ ಅಪಘಾತ ಸಂಭವಿಸಿದ ಹಿನ್ನೆಲೆಯಲ್ಲಿ ಅಕ್ರಮ ದನಗಳ ಸಾಗಣೆ ಪ್ರಕರಣ ಬಯಲಿಗೆ ಬಂದಿದ್ದು ಕೇರಳ ರಾಜ್ಯಕ್ಕೆ ದನಗಳನ್ನು ಸಾಗಿಸುತ್ತಿದ್ದ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಹೊಸದುರ್ಗ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಾಂದರ್ಬಿಕ ಚಿತ್ರ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.