ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಭಾರತಕ್ಕೆ ಜಯ; ಕುಲಭೂಷಣ್ ಗಲ್ಲುಶಿಕ್ಷೆಗೆ ಕೋರ್ಟ್ ತಡೆಯಾಜ್ಞೆ

Published : May 18, 2017, 04:05 PM ISTUpdated : Apr 11, 2018, 01:10 PM IST
ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಭಾರತಕ್ಕೆ ಜಯ; ಕುಲಭೂಷಣ್ ಗಲ್ಲುಶಿಕ್ಷೆಗೆ ಕೋರ್ಟ್ ತಡೆಯಾಜ್ಞೆ

ಸಾರಾಂಶ

ಭಾರತದ ನಿವೃತ್ತ ಸೇನಾಧಿಕಾರಿ ಕುಲಭೂಷಣ್ ಜಾಧವ್’ಗೆ ಅಂತರಾಷ್ಟ್ರೀಯ ನ್ಯಾಯಾಲಯ ರಿಲೀಫ್ ನೀಡಿದೆ. ಅವರ ಗಲ್ಲುಶಿಕ್ಷೆಗೆ ತಡೆಯಾಜ್ಞೆ ನೀಡಿದೆ. ಅಂತಿಮ ತೀರ್ಪು ಬರುವವರೆಗೆ ಜಾಧವ್'ಗೆ ಗಲ್ಲುಶಿಕ್ಷೆ ಜಾರಿ ಇಲ್ಲವೆಂದು ನ್ಯಾಯಾಲಯ ಮಹತ್ತರ ತೀರ್ಪು ನೀಡಿದೆ.

ನವದೆಹಲಿ (ಮೇ.18): ಭಾರತದ ನಿವೃತ್ತ ಸೇನಾಧಿಕಾರಿ ಕುಲಭೂಷಣ್ ಜಾಧವ್’ಗೆ ಅಂತರಾಷ್ಟ್ರೀಯ ನ್ಯಾಯಾಲಯ ರಿಲೀಫ್ ನೀಡಿದೆ. ಅವರ ಗಲ್ಲುಶಿಕ್ಷೆಗೆ ತಡೆಯಾಜ್ಞೆ ನೀಡಿದೆ. ಅಂತಿಮ ತೀರ್ಪು ಬರುವವರೆಗೆ ಜಾಧವ್'ಗೆ ಗಲ್ಲುಶಿಕ್ಷೆ ಜಾರಿ ಇಲ್ಲವೆಂದು ನ್ಯಾಯಾಲಯ ಮಹತ್ತರ ತೀರ್ಪು ನೀಡಿದೆ.

ಎರಡೂ ದೇಶಗಳಿಗೂ ಪ್ರತಿಷ್ಠೆ ಪ್ರಕರಣವಾಗಿದ್ದ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಭಾರತಕ್ಕೆ ಗೆಲುವು ಸಿಕ್ಕಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ನ್ಯಾ. ರೋನಿ ಅಬ್ರಾಹಿಂ ನೇತೃತ್ವದ 16 ನ್ಯಾಯಮೂರ್ತಿಗಳ ಪೀಠವು ಈ ಮಹತ್ತರವಾದ ತೀರ್ಪನ್ನು ನೀಡಿದೆ. ಭಾರತದ ಪರ ಖ್ಯಾತ ವಕೀಲ ಹರೀಶ್ ಸಾಳ್ವೆ ವಾದ ಮಂಡಿಸಿದ್ದರು. ಭಾರತದ ವಾದಕ್ಕೆ ಅಂತರಾಷ್ಟ್ರೀಯ ನ್ಯಾಯಾಲಯ ಮನ್ನಣೆ ನೀಡಿದೆ.

ಪಾಕಿಸ್ತಾನ ಭಾರತಕ್ಕೆ ಕುಲಭೂಷಣ್ ಜಾಧವ್ ರಾಜತಾಂತ್ರಿಕ ಭೇಟಿಗೆ ಅವಕಾಶ ನೀಡಬೇಕಿತ್ತು. ಭೇಟಿಗೆ ಅವಕಾಶ ನೀಡದೇ ವಿಯೆನ್ನಾ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಭಾರತದ ಮನವಿಯನ್ನು ಅಂತರಾಷ್ಟ್ರೀಯ ನ್ಯಾಯಾಲಯ ಎತ್ತಿ ಹಿಡಿದಿದೆ. ಅಂತಿಮ ತೀರ್ಪು ಬರುವವರೆಗೆ ಜಾಧವ್ ಗೆ ಗಲ್ಲುಶಿಕ್ಷೆ ಜಾರಿ ಇಲ್ಲವೆಂದು ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲವರ್ ಜೊತೆ ಸೇರಿ ಪತಿ ಹತ್ಯೆಗೈದು ದೇಹದ ಒಂದೊಂದು ಪೀಸ್ ಜಿಲ್ಲೆಯ ಪ್ರತಿ ಗಾಮದಲ್ಲಿ ಎಸೆದ ಪತ್ನಿ
ಗೋವಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಗೆಲುವು, 10 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್