
ಬೆಂಗಳೂರು(ಜು.23): ಬೆಂಗಳೂರಿನಲ್ಲಿ ಸೆ. 144 ಜಾರಿಯಾಗಿದ್ದು, ಇಂದು ಸಂಜೆ 6 ಗಂಡೆಯಿಂದಲೇ ನಗರದಾದ್ಯಂತ ಪಬ್, ಬಾರ್’ಗಳು ಬಂದ್ ಇರಲಿವೆ.
ರಾಜ್ಯ ರಾಜಕಾರಣದ ವಿಪ್ಲವ ಮತ್ತು ಬೆಂಗಳೂರಿನಲ್ಲಿ ರಾಜಕೀಯ ಪಕ್ಷಗಳ ಕರ್ಯಕರ್ತರ ಜಟಾಪಟಿ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಸೆ.144 ಜಾರಿ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಅಲೋಕ್ ಕುಮಾರ್ ಘೋಷಿಸಿದ್ದಾರೆ.
ಈಗಾಗಲೇ ವಿಧಾನಸಭೆ ಬಳಿ ಸೆ.144 ಜಾರಿಯಲ್ಲಿದ್ದು, ಈಗ ಆದೇಶವನ್ನು ಇಡೀ ನಗರಕ್ಕೆ ಅನ್ವಯಿಸಲಾಗಿದೆ ಎಂದು ಅಲೋಕ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ವಿಧಾನಸಭೆಯಲ್ಲಿ ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡುತ್ತಿದ್ದು, ಸರ್ಕಾರ ಬಿದ್ದರೆ ಎದುರಾಗಬಹುದಾದ ಪರಿಸ್ಥಿತಿಯನ್ನು ನಿಭಾಯಿಸಲು ನಗರ ಪೊಲೀಸ್ ಇಲಾಖೆ ಸರ್ವ ಸನ್ನದ್ಧವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.