
ನವದೆಹಲಿ (ಜ.20): 12 ನೇ ತರಗತಿ ವಿದ್ಯಾರ್ಥಿಯೊಬ್ಬ ತಮ್ಮ ಕಾಲೇಜಿನ ಪ್ರಾಂಶುಪಾಲರನ್ನು ಶೂಟ್ ಮಾಡಿರುವ ವಿಚಿತ್ರ ಘಟನೆ ಹರ್ಯಾಣದಲ್ಲಿ ನಡೆದಿದೆ.
ಪ್ರಾಂಶುಪಾಲರು ಬೈದಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ತಂದೆಯ ಲೈಸೆನ್ಸ್ ಇರುವ ರಿವಾಲ್ವರ್ ತಂದು ಪ್ರಾಂಶುಪಾಲರನ್ನು ಶೂಟ್ ಮಾಡಿದ್ದಾನೆ. 3 ಬುಲೆಟ್'ಗಳು ದೇಹವನ್ನು ಹೊಕ್ಕಿದ್ದು ಪ್ರಾಂಶುಪಾಲರಾದ ರಿತು ಚಾಬ್ರಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ರಿವಾಲ್ವರ್ ಸಮೇತ ಮಧ್ಯಾಹ್ನ ಕಾಲೇಜಿಗೆ ಬಂದ ವಿದ್ಯಾರ್ಥಿ ಪ್ರಾಂಶುಪಾಲರನ್ನು ನೋಡಬೇಕೆಂದು ಹೇಳಿದ. ಪ್ರಾಂಶುಪಾಲರ ರೂಮಿಗೆ ನುಗ್ಗಿದವನೇ ಅವರ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಕಾಲೇಜಿನ ಸಿಬ್ಬಂದಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.