
ವಿಶ್ವಸಂಸ್ಥೆ(ಸೆ.24): ವಿಶ್ವಸಂಸ್ಥೆಯ ಹವಾಮಾನ ಶೃಂಗಸಭೆಯ ವೇದಿಕೆಯಲ್ಲಿ, ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್ಬರ್ಗ್ ವಿಶ್ವನಾಯಕರನ್ನೇ ತರಾಟೆಗೆ ತೆಗೆದುಕೊಂಡ ಅಚ್ಚರಿಯ ಘಟನೆ ನಡೆದಿದೆ.
ಜಾಗತಿಕ ತಾಪಮಾನ ನಿಯಂತ್ರಣ, ಹಸಿರುಮನೆ ಅನಿಲ ಹೊರಸೂಸುವಿಕೆ ನಿಯಂತ್ರಣ ಮಾಡಲು ವಿಫಲರಾಗಿರುವ ವಿಶ್ವ ನಾಯಕರು ನನ್ನ ಪೀಳಿಗೆಗೆ ದ್ರೋಹ ಮಾಡಿದ್ದಾರೆ ಎಂದು ಗ್ರೆಟಾ ವಿಶ್ವದ ಘಟಾನುಘಟಿ ನಾಯಕರ ವಿರುದ್ಧ ಹರಿಹಾಯ್ದಿದ್ದಾಳೆ.
ಪರಿಸರ ನಾಶಕ್ಕೆ ಮುಂದಾಗಿರುವ ನಿಮ್ಮಂತ ನಾಯಕರಿಗೆ ಅದೆಷ್ಟು ಧೈರ್ಯ ಎಂದು ಗ್ರೆಟಾ ಜೋರು ಧ್ವನಿಯಲ್ಲಿ ಕೇಳಿದಾಗ ಸಭೆ ಒಂದು ಕ್ಷಣ ಮೌನಕ್ಕೆ ಶರಣಾಯ್ತು.
ಕೇವಲ ಹಣ, ಬಾಹ್ಯ ಆರ್ಥಿಕ ಬೆಳವಣಿಗೆ ಎಂಬ ಕನಸಿನ ಬೆನ್ನೇರಿ ಹೊರಟಿರುವ ಮಾನವ ಜನಾಂಗ ಸಾಮೂಹಿಕ ವಿನಾಶದತ್ತ ಹೆಜ್ಜೆ ಹಾಕುತ್ತಿದೆ ಎಂದು ಗ್ರೆಟಾ ಇಡೀ ವಿಶ್ವ ಸಮುದಾಯಕ್ಕೆ ಎಚ್ಚರಿಕೆ ನೀಡಿದಳು.
ವಿಶ್ವಸಂಸ್ಥೆಯ ವೇದಿಕೆಯಲ್ಲೇ ವಿಶ್ವ ನಾಯಕರನ್ನು ತರಾಟೆಗೆ ತೆಗೆದುಕೊಂಡ ಸ್ವಿಡನ್ ಮೂಲದ ಗ್ರೆಟಾ ಥನ್ಬರ್ಗ್ , ಹವಾಮಾನ ಬದಲಾವಣೆಗೆ ಸಂಬಂಧಿ ಚಳುವಳಿ ಮೂಲಕ ಜಾಗತಿಕ ಮಟ್ಟದಲ್ಲಿ ಖ್ಯಾತಿಯಾಗಿದ್ದಾಳೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.