ಇದು ರಾಜ್ಯವೇ ಬೆಚ್ಚಿ ಬೀಳಿಸುವ ಸುದ್ಧಿ; ಸಿಎಂ ಆಪ್ತನಿಂದಲೇ ಕೊಲೆ, ದರೋಡೆ, ರೇಪ್'ಗೆ ಕುಮ್ಮಕ್ಕು?

Published : Feb 07, 2018, 11:59 AM ISTUpdated : Apr 11, 2018, 01:05 PM IST
ಇದು ರಾಜ್ಯವೇ ಬೆಚ್ಚಿ ಬೀಳಿಸುವ ಸುದ್ಧಿ; ಸಿಎಂ ಆಪ್ತನಿಂದಲೇ ಕೊಲೆ, ದರೋಡೆ, ರೇಪ್'ಗೆ ಕುಮ್ಮಕ್ಕು?

ಸಾರಾಂಶ

ಸಿಎಂ ಸಿದ್ದರಾಮಯ್ಯ  ಆಪ್ತ  ಭೈರತಿ ಬಸವರಾಜ್ ವಿರುದ್ಧ ಮಾಜಿ ಶಾಸಕ ನಂದೀಶ್ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ಇದು ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಸುದ್ಧಿ.

ಬೆಂಗಳೂರು (ಫೆ.07): ಸಿಎಂ ಸಿದ್ದರಾಮಯ್ಯ  ಆಪ್ತ  ಭೈರತಿ ಬಸವರಾಜ್ ವಿರುದ್ಧ ಮಾಜಿ ಶಾಸಕ ನಂದೀಶ್ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ಇದು ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಸುದ್ಧಿ.

ಶಾಸಕ ನಂದೀಶ್ ರೆಡ್ಡಿ,  ವಿಧಾನಸೌಧದಲ್ಲಿ ಸಿಎಂ ಬಲಗೈ ಬಂಟ ಶಾಸಕ ಭೈರತಿ ಬಸವರಾಜ್ ವಿರುದ್ಧ  ದಾಖಲೆ ಬಿಡುಗಡೆ ಮಾಡಿದ್ದಾರೆ.  ಕೆ ಆರ್ ಪುರಂ ಕ್ಷೇತ್ರದಲ್ಲಿ ಭೈರತಿ ಬಸವರಾಜ್ ಮತ್ತು ಬೆಂಬಲಿಗರು ನಾಲ್ಕೂವರೆ ವರ್ಷದಲ್ಲಿ 102 ಕೊಲೆಗಳನ್ನ ಮಾಡಿದ್ದಾರೆಂದು ದಾಖಲೆ ಸಮೇತ ಮಾಹಿತಿ ನೀಡಿದ್ದಾರೆ.  ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜ್ ಮತ್ತು ಬೆಂಬಲಿಗರ ಕೈವಾಡ ಇದೆ.  100ಕ್ಕೂ ಹೆಚ್ಚು ಅತ್ಯಾಚಾರಗಳಾಗಿವೆ.   200 ಕ್ಕೂ ಹೆಚ್ಚು ಸರಗಳ್ಳತನ ಆಗಿದೆ.  ಸಿಎಂ ಬಲಗೈ ಬಂಟ ಭೈರತಿ ಬಸವರಾಜ್ ಪ್ರತಿನಿಧಿಸುವ  ಕೆ ಆರ್ ಪುರಂ ವಿಧಾನಸಭಾ ಕ್ಷೇತ್ರ ಕ್ರೈಂ ಕ್ಷೇತ್ತವಾಯ್ತಾ ?   ಕೆ ಆರ್ ಪುರಂನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ.  1 ಸಾವಿರ ಕೋಟಿಗೂ ಅಧಿಕ ಹಣ ಕೆಆರ್ ಪುರಂ ಕ್ಷೇತ್ರಕ್ಕೆ ಬಿಡುಗಡೆಯಾಗಿದೆ.  ಇದರಲ್ಲಿ 600 ಕೋಟಿಗೂ ಅಧಿಕ ಭ್ರಷ್ಟಾಚಾರವಾಗಿದೆ.  ನಾನು ಶಾಸಕನಾಗಿದ್ದ ಅವಧಿಯಲ್ಲಿ ಅನುದಾನ ಸದ್ಬಳಕೆ ಮಾಡಿಕೊಂಡಿದ್ದೆ.  ಈಗಿನ ಶಾಸಕ ರೌಡಿಯಂತೆ ವರ್ತಿಸುತ್ತಿದ್ದಾರೆ.  ನೂರಾರು ಕೋಟಿ ಗುಳುಂ ಮಾಡಿದ್ದಾರೆ ಎಂದು  ನಂದೀಶ್ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ