
ಬೆಂಗಳೂರು [ಸೆ. 23] ಆರ್ಟಿಕಲ್ 370 ರದ್ದಾದ ನಂತರ ಕೇಂದ್ರ ಸರ್ಕಾರ ಒಂದೊಂದೆ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಕಾಶ್ಮೀರದಲ್ಲಿ ನಾಶವಾದ ಎಲ್ಲ ದೇವಾಲಯಗಳು ಮತ್ತು ಶಾಲೆಗಳು ಮರುಸ್ಥಾಪನೆಯಾಗಲಿವೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಖಾತೆ ಸಚಿವ ಜಿ.ಕಿಶನ್ ರೆಡ್ಡಿ ಸೋಮವಾರ ತಿಳಿಸಿದ್ದಾರೆ.
ಈ ಬಗ್ಗೆ ಕುರಿತು ಸರ್ವೇ ನಡೆದಿದ್ದು, ಸುಮಾರು 5 ಸಾವಿರ ದೇವಾಲಯಗಳು ಪುನರ್ ನಿರ್ಮಾಣಗೊಳ್ಳಲಿದೆ. ಈ ಹಿಂದೆ ನಾಶಗೊಂಡ ಸಿನಿಮಾ ಮಂದಿರ ಹಾಗೂ ಶಾಲೆಗಳು ಪುನರ್ ನಿರ್ಮಾಣವಾಗಲಿವೆ ಎಂದು ಹೇಳಿದರು.
ರಾಜ್ಯದ ಪ್ರತಿ ಹಳ್ಳಿಯಿಂದ 5 ಜನರನ್ನು ಸರ್ಕಾರಿ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಸೈನ್ಯ , ನೌಕಾಪಡೆ ಮತ್ತು ವಾಯುಪಡೆಯು ಸಹ ನೇಮಕಾತಿಗೆ ಚಾಲನೆ ನೀಡಲು ಯೋಜನೆ ರೂಪಿಸಲಾಗುತ್ತಿದೆ. ಕಾಶ್ಮೀರದ ಚಿತ್ರಣ ನಿಧಾನವಾಗಿ ಬದಲಾಗುತ್ತದೆ ಕೇಂದ್ರ ಸರ್ಕಾರದ ಯೋಜನೆಗಳು ಹೊಸ ಅಭಿವೃದ್ಧಿಯ ಕಡೆ ಕೊಂಡೊಯ್ಯಲಿದೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.