ಬಿತ್ತಿದಂತೆ ಬೆಳೆ - ಜುಲೈ ತಿಂಗಳಲ್ಲಿ ಕರ್ನಾಟಕದಲ್ಲಿ ಮೋಡ ಬಿತ್ತನೆ!

Published : Jun 29, 2019, 08:10 AM ISTUpdated : Jul 01, 2019, 01:50 PM IST
ಬಿತ್ತಿದಂತೆ ಬೆಳೆ - ಜುಲೈ ತಿಂಗಳಲ್ಲಿ ಕರ್ನಾಟಕದಲ್ಲಿ ಮೋಡ ಬಿತ್ತನೆ!

ಸಾರಾಂಶ

ಜೂನ್ ಮುಗಿಯುತ್ತಾ ಬಂದರೂ ರಾಜ್ಯದಲ್ಲಿ ಮಳೆ ಅಭಾವ | ಮಳೆ ಅಭಾವದಿಂದ ಕೃಷಿ ಚಟುವಟಿಕೆಗಳಿಗೆ ಹಿನ್ನಡೆ |ಹುಬ್ಬಳ್ಳಿ, ಮೈಸೂರು ಕೇಂದ್ರವಾಗಿಟ್ಟುಕೊಂಡು ಬಿತ್ತನೆ | 

ಬೆಂಗಳೂರು (ಜೂ. 29): ರಾಜ್ಯದಲ್ಲಿ ಮಳೆಯ ಅಭಾವ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಮೋಡ ಬಿತ್ತನೆ ಕಾರ್ಯವನ್ನು ಜುಲೈ ತಿಂಗಳ ಎರಡನೇ ವಾರದಲ್ಲಿ ಆರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ಈ ಮೊದಲು ತೀರ್ಮಾನಿಸಿದಂತೆ ಬೆಂಗಳೂರಿನ ಬದಲು ಮೈಸೂರು ಕೇಂದ್ರವಾಗಿಟ್ಟುಕೊಂಡು ಬಿತ್ತನೆ ಮಾಡಲು ನಿರ್ಧರಿಸಿದೆ.

ಮೋಡ ಬಿತ್ತನೆ ಕಾರ್ಯಕ್ಕೆ ಕೇಂದ್ರ ಸರ್ಕಾರವು ಅನುಮತಿ ಸಹ ನೀಡಿದೆ. ಮೋಡ ಬಿತ್ತನೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜುಲೈ ತಿಂಗಳ ಎರಡನೇ ವಾರದಲ್ಲಿ ಹುಬ್ಬಳ್ಳಿ ಮತ್ತು ಮೈಸೂರನ್ನು ಕೇಂದ್ರವಾಗಿಟ್ಟುಕೊಂಡು ಆರಂಭಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಈ ಮೊದಲು ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಮೋಡ ಬಿತ್ತನೆ ಮಾಡಲು ನಿರ್ಧರಿಸಲಾಗಿತ್ತು. ಆದರೆ, ವಿಮಾನಯಾನ ಮತ್ತು ರಕ್ಷಣಾ ಇಲಾಖೆಯೊಂದಿಗೆ ರಾಜ್ಯದ ಅಧಿಕಾರಿಗಳು ಸಭೆ ನಡೆಸಿದ ಬಳಿಕ ಬೆಂಗಳೂರು ಬದಲು ಮೈಸೂರನ್ನು ಕೇಂದ್ರವಾಗಿಟ್ಟುಕೊಂಡು ಬಿತ್ತನೆ ಮಾಡುವ ನಿರ್ಣಯ ಕೈಗೊಳ್ಳಲಾಗಿದೆ.

ಬೆಂಗಳೂರಲ್ಲಿ ಎಚ್‌ಎಎಲ್‌, ಜಕ್ಕೂರು ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಹೆಚ್ಚಾಗಿ ವಿಮಾನಗಳ ಹಾರಾಟ ನಡೆಯಲಿದೆ. ಹೀಗಾಗಿ ಬೆಂಗಳೂರಲ್ಲಿ ಮೋಡಬಿತ್ತನೆ ಕಾರ್ಯ ಕೈಗೊಳ್ಳುವುದು ಸಮಂಜಸವಲ್ಲ ಎಂಬ ಅಭಿಪ್ರಾಯಗಳು ವ್ಯಕ್ತವಾದ ಕಾರಣ ಸ್ಥಳ ಬದಲಾವಣೆ ಮಾಡಲಾಗಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌
ದಲಿತ ಸಮುದಾಯಕ್ಕೆ ಸಿಎಂ ಹುದ್ದೆ ಕೊಡಿ ಎಂದು ಸಮಯ ಬಂದಾಗ ಕೇಳುವೆ: ಸಚಿವ ಮಹದೇವಪ್ಪ