ಕನ್ನಡ ವಿರೋಧಿ ಅಧಿಕಾರಿಗೆ ತಕ್ಕ ಶಾಸ್ತಿ ಮಾಡ್ತೇವೆ

Published : Mar 17, 2017, 10:19 AM ISTUpdated : Apr 11, 2018, 12:55 PM IST
ಕನ್ನಡ ವಿರೋಧಿ ಅಧಿಕಾರಿಗೆ ತಕ್ಕ ಶಾಸ್ತಿ ಮಾಡ್ತೇವೆ

ಸಾರಾಂಶ

ನಮ್ಮಲ್ಲಿ ಕೆಲವು ವಿಕೃತ ಮನಸ್ಸಿನ ಅಧಿಕಾರಿಗಳಿದ್ದಾರೆ. ಕೆಲವರು ಉದ್ಧಟತನದಿಂದ ವರ್ತಿಸುತ್ತಿದ್ದಾರೆ.

ಬೆಂಗಳೂರು(ಮಾ.17): ಕನ್ನಡದ ವಿರುದ್ಧ ಕ್ಯಾತೆ ತೆಗೆದ ದೆಹಲಿ ಮೂಲದ ಐಎಎಸ್ ಅಧಿಕಾರಿಗೆ ನೋಟಿಸ್ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಹಾಗೂ ಸಂಸದೀಯ ವ್ಯವಹಾರ ಖಾತೆ ಸಚಿವ ಟಿ.ಬಿ. ಜಯಚಂದ್ರ ಖಾರವಾಗಿ ಪ್ರತಿಕ್ರಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಐಎಎಸ್ ಅಧಿಕಾರಿ ಶ್ರೀವತ್ಸಾ ಕನ್ನಡ ವಿರೋಧಿ ಧೋರಣೆ ತಪ್ಪು. ಈ ಬಗ್ಗೆ ನಾನು ಮಾಹಿತಿ ಪಡೆಯುತ್ತೇನೆ. ಯಾವುದೇ ಅಧಿಕಾರಿ ಹೀಗೆ ಹೇಳುವುದು ಸರಿಯಲ್ಲ. ಆಡಳಿತ ಭಾಷೆ ಕನ್ನಡ, ಅದು ಪಾಲನೆ ಆಗಬೇಕು. ಇಲ್ಲವಾದಲ್ಲಿ ಕ್ರಮ ಕೈಗೊಳ್ಳಲಾಗುವುದು'ಎಂದು ತಿಳಿಸಿದ್ದಾರೆ.

ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಪ್ರತಿಕ್ರಯಿಸಿ, ನಮ್ಮಲ್ಲಿ ಕೆಲವು ವಿಕೃತ ಮನಸ್ಸಿನ ಅಧಿಕಾರಿಗಳಿದ್ದಾರೆ

ಕೆಲವರು ಉದ್ಧಟತನದಿಂದ ವರ್ತಿಸುತ್ತಿದ್ದಾರೆ. ಅಧಿಕಾರಿಗಳ ಕನ್ನಡ ವಿರೋಧಿ ಧೋರಣೆಯನ್ನು ಸಹಿಸಲ್ಲ.ಇಂದೇ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ. ಸಿದ್ದರಾಮಯ್ಯ ಜೊತೆ ಮಾತನಾಡ್ತೀನಿ.ಕನ್ನಡ ವಿರೋಧಿ ಅಧಿಕಾರಿ ಶ್ರೀವತ್ಸ ಕೃಷ್ಣಗೆ ತಕ್ಕ ಶಾಸ್ತಿ ಮಾಡ್ತೇನೆ ಎಂದು ಅಧಿಕಾರಿಯ ವಿರುದ್ಧ ಕಿಡಿಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಂಗ್ಲಾದೇಶದಲ್ಲಿ ಅನಾಮಿಕನ ಕೈಚಳಕ, ಒಸ್ಮಾನ್ ಹದಿ ಬೆನ್ನಲ್ಲೇ ಮತ್ತೊಬ್ಬ ನಾಯಕನಿಗೆ ಗುಂಡೇಟು
ದುಬೈನ ಬುರ್ಜ್ ಖಲೀಫಾಗೆ ಬಡಿದ ಸಿಡಿಲು: ವೀಡಿಯೋ ವೈರಲ್