ಕನ್ನಡಿಗರ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜಯಲಲಿತಾಗೆ ಮುಖ್ಯಮಂತ್ರಿ ಮನವಿ

Published : Sep 15, 2016, 03:32 PM ISTUpdated : Apr 11, 2018, 12:52 PM IST
ಕನ್ನಡಿಗರ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜಯಲಲಿತಾಗೆ ಮುಖ್ಯಮಂತ್ರಿ ಮನವಿ

ಸಾರಾಂಶ

ಬೆಂಗಳೂರು (ಸೆ.15): ನಾಳೆ ತಮಿಳುನಾಡು ಬಂದ್ ನಡೆಯಲಿದ್ದು ಕನ್ನಡಿಗರ ಸುರಕ್ಷತೆಗಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಜಯಲಲಿತಾರಿಗೆ ಮನವಿ ಮಾಡಿಕೊಂಡಿದ್ದಾರೆ.

"12 ರಂದು ಕರ್ನಾಟಕದಲ್ಲಿ ಕಾವೇರಿ ಬಂದ್ ಗೆ ಕರೆಕೊಟ್ಟ ಸಂದರ್ಭದಲ್ಲಿ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ಮಾಡಲಾಗಿತ್ತು. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿ ಪ್ರತಿಭಟನೆಯ ಕಿಚ್ಚು ಹೆಚ್ಚಾಯಿತು. ನಾವು ಮುಂಜಾಗ್ರತಾ ಕ್ರಮ ಕೈಗೊಂಡರೂ ಗಲಾಟೆಯನ್ನು ಹತ್ತಿಕ್ಕಲು ಸಾಧ್ಯವಾಗಲಿಲ್ಲ.ನಂತರ ಪರಿಸ್ಥಿತಿ ಹದಕ್ಕೆ ಬಂದಿದೆ. ಪ್ರತಿಭಟನಾಕಾರರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಇಂತಹ ಘಟನೆ ಪುನರಾವರ್ತಿತ ಆಗದಂತೆ ಕಾನೂನು ಸವ್ಯವಸ್ಥೆ ಕಾಪಾಡಲು ನಿರ್ದೇಶನ ನೀಡಿದ್ದೇನೆ" ಎಂದು ಜಯಲಲಿತಾಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಕಾವೇರಿ ಬಂದ್ ಸಂದರ್ಭದಲ್ಲಿ ಉಂಟಾದ ಹಾನಿಯ ಬಗ್ಗೆ ಸಿದ್ಧರಾಮಯ್ಯ ಕನಿಕರ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಿಂದ ಯಾರಿಗೂ ಲಾಭವಿಲ್ಲ ಎಂದಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಡದಿ ಟೌನ್ ಶಿಪ್ ಜಿದ್ದಿನಿಂದ ಅನುಷ್ಠಾನ ಮಾಡುತ್ತಿಲ್ಲ: ಶಾಸಕ ಎಚ್.ಸಿ.ಬಾಲಕೃಷ್ಣ
ಪ್ರವಾಸಿಗರ ಸ್ವರ್ಗ.. ಅಸ್ಸಾಂ ರಾಜ್ಯ ಯಾವುದಕ್ಕೆ ಪ್ರಸಿದ್ಧ ನಿಮಗೆ ಗೊತ್ತೇ?