ಅಮಿತ್ ಶಾ ವಿರುದ್ಧ ಏಕವಚನದಲ್ಲಿ ವಾಗ್ದಾಳಿ : ಬಿಜೆಪಿ ನಾಯಕರಿಗೆ ಸಿಎಂ ಸವಾಲ್..!

Published : Feb 04, 2018, 01:21 PM ISTUpdated : Apr 11, 2018, 12:54 PM IST
ಅಮಿತ್ ಶಾ ವಿರುದ್ಧ  ಏಕವಚನದಲ್ಲಿ ವಾಗ್ದಾಳಿ : ಬಿಜೆಪಿ ನಾಯಕರಿಗೆ ಸಿಎಂ ಸವಾಲ್..!

ಸಾರಾಂಶ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನುಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನದಲ್ಲಿ ನಿಂದಿಸಿದ್ದಾರೆ. ಅವನು ಯಾರು..? ಅಮಿತ್ ಶಾ ಸುಳ್ಳು ಹೇಳಿಕೊಂಡು ತಿರುಗಾಡಿದರೆ ಏನು ಮಾಡಲು ಆಗುತ್ತದೆ ಎಂದು ಹೇಳಿದ್ದಾರೆ.

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನುಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನದಲ್ಲಿ ನಿಂದಿಸಿದ್ದಾರೆ. ಅವನು ಯಾರು..? ಅಮಿತ್ ಶಾ ಸುಳ್ಳು ಹೇಳಿಕೊಂಡು ತಿರುಗಾಡಿದರೆ ಏನು ಮಾಡಲು ಆಗುತ್ತದೆ ಎಂದು ಹೇಳಿದ್ದಾರೆ.

ಅಲ್ಲದೆ ಸುಳ್ಳು ಹೇಳುವುದು, ಟೀಕೆ ಮಾಡುವುದು ಬಿಜೆಪಿಯವರ ಕೆಲಸವಾಗಿದೆ. ಸುಳ್ಳು ಹೇಳಿದರೆ  ಜನರು ನಂಬುವುದಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೋದಿ ಮಹದಾಯಿ ಬಗ್ಗೆ ಬೆಂಗಳೂರಿಗೆ ಆಗಮಿಸಿದ ವೇಳೆ ಮಾತನಾಡುತ್ತಾರೆ ಎನ್ನುವ ನಿರೀಕ್ಷೆ ಇದೆ. ನಿನ್ನೆ ದಿನೇಶ್ ಗುಂಡೂರಾವ್ ಹಾಗೂ ಕೃಷ್ಣ ಭೈರೇಗೌಡ ನೀಡಿದ  ಮಾಹಿತಿ ಸರಿ ಇದೆ.

ಬೇಕಿದ್ದರೆ ಬಿಜೆಪಿಯವರು ವಿಧಾನಸಭೆಯಲ್ಲಿ ಚಾಲೇಂಜ್ ಮಾಡಲಿ ಎಂದು ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ. ಯಾರೇ ಕೋಮು ಗಲಭೆ ಸೃಷ್ಟಿ ಮಾಡಲು ಯತ್ನಿಸಿದರೂ ಅವರನ್ನು ಬಿಡುವುದಿಲ್ಲ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲಿಯೋನಲ್ ಮೆಸ್ಸಿಗೆ RM 003-V2 ವಾಚ್ ಉಡುಗೊರೆ, ಇದ್ರ ಬೆಲೆಗೆ 2 ರೋಲ್ಸ್ ರಾಯ್ಸ್ ಕಾರು ಬರುತ್ತೆ
ಮಾದಪ್ಪ ಮೆಸ್‌ನಲ್ಲಿ ಮುದ್ದೆ ಬಡಿಸೋದು ಅಶುಚಿ; ಟೀಕಿಸಿದವರ ಬೌದ್ಧಿಕ ಬಡತನ ಬಯಲಿಗೆಳೆದ ಕಾರ್ತಿಕ್ ರೆಡ್ಡಿ!