ಸಚಿವ ಕುಲಕರ್ಣಿಗೆ ಸಿಎಂ ಕ್ಲೀನ್‌ಚಿಟ್

Published : Nov 29, 2017, 08:33 AM ISTUpdated : Apr 11, 2018, 01:01 PM IST
ಸಚಿವ ಕುಲಕರ್ಣಿಗೆ ಸಿಎಂ ಕ್ಲೀನ್‌ಚಿಟ್

ಸಾರಾಂಶ

ಆಡಿಯೋ, ವಿಡಿಯೋ ಎರಡೂ ನೋಡಿದ್ದೇನೆ. ಕೊಲೆ ಕೇಸಿಗೂ, ವಿನಯ್‌ಗೂ ಸಂಬಂಧ ಇಲ್ಲ

ಬೆಂಗಳೂರು: ‘ಧಾರವಾಡದ ಬಿಜೆಪಿ ಜಿಲ್ಲಾ ಪಂಚಾಯತ ಸದಸ್ಯ ಯೋಗೀಶಗೌಡ ಗೌಡರ ಅವರ ಕೊಲೆ ಪ್ರಕರಣಕ್ಕೂ ಸಚಿವ ವಿನಯ್ ಕುಲಕರ್ಣಿ ಅವರಿಗೂ ಯಾವುದೇ ಸಂಬಂಧವಿಲ್ಲ. ಪ್ರಕರಣ ಕುರಿತ ಆಡಿಯೋ ಕೇಳಿದ್ದೇನೆ. ವಿಡಿಯೋ ನೋಡಿದ್ದೇನೆ. ಅದರಲ್ಲಿ ಅಂಥದ್ದೇನೂ ಇಲ್ಲ. ಆರೋಪ ಬಂದಾಕ್ಷಣ ರಾಜೀನಾಮೆ ನೀಡಬೇಕು ಎನ್ನುವುದು ಸರಿಯಲ್ಲ. ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ, ಜಿಗಜಿಣಗಿ ಅಂತವರ ಮೇಲೂ ಆರೋಪಗಳಿವೆ ಅವರೇನೂ ರಾಜೀನಾಮೆ ನೀಡಿದ್ದಾರೆಯೇ?’ ಹೀಗಂತ ಸಂಪುಟ ಸಹದ್ಯೋಗಿ ವಿನಯ್ ಕುಲಕರ್ಣಿ ಅವರನ್ನು ಬಲವಾಗಿ ಸಮರ್ಥಿಸಿ ಕೊಂಡಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿನಯ್ ಕುಲಕರ್ಣಿ ಅವರ ವರ್ಚಸ್ಸಿಗೆ ಮಸಿ ಬಳಿಯಲು ಬಿಜೆಪಿಯವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ವಿನಯ್ ಕುಲಕರ್ಣಿ ಅವರ ಹೆಸರು ಎಫ್‌ಐಆರ್‌ನಲ್ಲೂ ಇಲ್ಲ. ಹೀಗಿದ್ದ ಮೇಲೆ ಅವರ ಹೆಸರಿಗೆ ಈ ಪ್ರಕರಣವನ್ನು ತಳಕುಹಾಕುವುದು ಎಷ್ಟು ಸರಿ?’ ಎಂದು ಪ್ರಶ್ನಿಸಿದರು.

ಅಲ್ಲದೆ, ‘ಪ್ರಕರಣ ಹಿಂತೆಗೆದು ಕೊಳ್ಳುವಂತೆ ವಿನಯ್ ಕುಲಕರ್ಣಿ ಅವರು ಹತ್ಯೆಗೀಡಾದ ಬಿಜೆಪಿ ಮುಖಂಡನ ಕುಟುಂಬದವರ ಮೇಲೆ ಒತ್ತಡ ಹಾಕಿದ್ದಾರೆ ಎಂಬುದು ಸಹಸುಳ್ಳು. ಈ ಬಗ್ಗೆ ಮಾಧ್ಯಮಗಳಲ್ಲಿ ಬಿತ್ತರವಾದ ಆಡಿಯೋ ಹಾಗೂ ವಿಡಿಯೋ ಅನ್ನು ತರಿಸಿ ನಾನು ಸಹ ನೋಡಿದ್ದೇನೆ. ಅದರಲ್ಲಿ ಅಂತಹದ್ದು ಏನೂ ಇಲ್ಲ’ ಎಂದು ಅವರು ಸಮರ್ಥಿಸಿಕೊಂಡರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಿಎಫ್ ಹಣ ಹಿಂಪಡೆಯುವ ನೀತಿಯಲ್ಲಿ 11 ಬದಲಾವಣೆ, EPFO 3.0 ನಿಯಮ ಜಾರಿ
ಕ್ರಿಸ್ಮಸ್ ಹಬ್ಬಕ್ಕೆ ಭಾರತದ ಹಲವು ನಗರದಲ್ಲಿ ಡ್ರೈ ಡೇ; ಮದ್ಯದಂಗಡಿ, ಬಾರ್ ತೆರೆದಿರುತ್ತಾ?