
ಬೆಂಗಳೂರು (ಜ.16): ಅದೇಕೋ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ಮೇಲೆ ಕಣ್ಣು ಬಿದ್ದಿದೆ. ಅಲ್ಲಿ ಶಾಸಕರಾಗಿರುವ ಬಿ.ಬಿ ಚಿಮ್ಮನಕಟ್ಟಿ ಅನಾರೋಗ್ಯ ಪೀಡಿತರಾಗಿರುವುದರಿಂದ ಅಲ್ಲಿನ ಜನ ಸಿದ್ದರಾಮಯ್ಯನವರಿಗೆ ನೀವು ಬಂದು ನಿಲ್ಲಿ ಎಂದು ಗಂಟು ಬಿದ್ದಿದ್ದಾರೆ.
ಬಾದಾಮಿ ಕುರುಬರು ಹೆಚ್ಚಾಗಿ ಪ್ರಾಬಲ್ಯ ಹೊಂದಿರುವ ಕ್ಷೇತ್ರ. ಹೀಗಾಗಿ ಸಿದ್ದರಾಮಯ್ಯ ಇಲ್ಲಿ ಬಂದು ನಿಂತರೆ ಅಕ್ಕಪಕ್ಕದ ಜಿಲ್ಲೆಗಳಲ್ಲೂ ಪರಿಣಾಮ ಆಗುತ್ತದೆ ಎಂದು ಸಿದ್ದರಾಮಯ್ಯ ಯೋಚಿಸುತ್ತಿದ್ದಾರೆ.
ದೆಹಲಿಯಲ್ಲಿ ಪತ್ರಕರ್ತರು ಬಾದಾಮಿ ಬಗ್ಗೆ ಕೇಳಿದಾಗ ‘ಹೌದು ಅಲ್ಲಿಯವರು ಬಹಳ ಹೇಳುತ್ತಿದ್ದಾರೆ. ಆದರೆ ನಾನು ತೀರ್ಮಾನ ತೆಗೆದುಕೊಂಡಿಲ್ಲ, ನೋಡೋಣ’ ಎಂದು ಹೇಳಿದ್ದಾರೆ. ಕಳೆದ ಒಂದು ವರ್ಷದಿಂದ ಚಾಮುಂಡೇಶ್ವರಿ ಪಕ್ಕಾ ಎನ್ನುತ್ತಿದ್ದ ಸಿದ್ದರಾಮಯ್ಯ ಈ ಬಾರಿ ಬಾದಾಮಿ ಬಗ್ಗೆ ಮಾತನಾಡಿದ್ದು ನೋಡಿದರೆ ಚಾಮುಂಡೇಶ್ವರಿ ವರ ಕೊಡುತ್ತಾಳೋ ಇಲ್ಲವೋ ಎಂಬ ಸಣ್ಣ ಸಂದೇಹ ಮುಖ್ಯಮಂತ್ರಿಗಳಿಗೆ ಇರುವಂತೆ ಕಾಣುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.