
ಬೆಂಗಳೂರು [ಜೂನ್.9] : ಕಾಂಗ್ರೆಸ್ ಅತೃಪ್ತ ಶಾಸಕರು ಒಂದೆಡೆ ಸಚಿವ ಸ್ಥಾನಕ್ಕಾಗಿ ಬಂಡಾಯದ ಬಾವುಟ ಹಾರಿಸಿದ್ದರೆ ಇನ್ನೊಂದು ಕಡೆ ಕೊಟ್ಟ ಸಚಿವ ಸ್ಥಾನಕ್ಕೂ ಅಪಸ್ವರ ಹೊರಹಾಕಿದ ಜೆಡಿಎಸ್ ಮುಖಂಡರಿಗೆ ಸಿಎಂ ಕುಮಾರಸ್ವಾಮಿ ಸರಿಯಾದ ತಿರುಗೇಟು ನೀಡಿದ್ದಾರೆ. ಸಚಿವರಿಗೆ ತಿರುಗೇಟು ನೀಡುವುದರೊಂದಿಗೆ ಇನ್ನೊಂದು ಕಡೆ ಸಚಿವರ ವಿದ್ಯಾರ್ಹತೆ ಪ್ರಶ್ನೆ ಮಾಡುತ್ತಿದ್ದ ಸಾಮಾಜಿಕ ಜಾಲತಾಣಿಗರಿಗೂ ಟಾಂಗ್ ನೀಡಿದ್ದಾರೆ.
ಹೈಯರ್ ಎಜುಕೇಷನ್, ಸಣ್ಣ ನೀರಾವರಿಗಿಂತ ಖಾತೆ ಬೇಕಾ? ಎಂದು ಪ್ರಶ್ನೆ ಮಾಡಿ ಜಿ.ಟಿ.ದೇವೇಗೌಡ ಮತ್ತು ಸಿ.ಎಸ್.ಪುಟ್ಟರಾಜು ಅವರಿಗೆ ಪರೋಕ್ಷ ಟಾಂಗ್ ನೀಡಿದ ಎಚ್ ಡಿಕೆ ಯಾವ ಖಾತೆ ನೀಡಿದರೆ ಏನು? ಸಮರ್ಥವಾಗಿ ಕೆಲಸ ಮಾಡಬೇಕು ಎಂಬ ಸಲಹೆಯನ್ನು ನೀಡಿದ್ದಾರೆ.
ಕೇಳಿದ ಖಾತೆಯನ್ನು ಎಲ್ಲರಿಗೂ ಕೊಡಲಿಕ್ಕೆ ಸಾಧ್ಯವಿದೆಯೇ? ನಾನೇನು ಓದಿದ್ದೇನೆ.. ನಾನು ಮುಖ್ಯಮಂತ್ರಿಯಾಗಿಲ್ಲವೆ? ಹಣಕಾಸು ಖಾತೆಯನ್ನೇ ಅವರಿಗೆ ಕೊಡಲಾ? ಎಂದು ಮಾಧ್ಯಮದವರಿಗೆ ಕುಮಾರಸ್ವಾಮಿ ಮರುಪ್ರಶ್ನೆ ಮಾಡಿದರು.
ಇಂತಹ ಖಾತೆ ಬೇಕೆಂದು ಅಸಮಾಧಾನಗೊಂಡವರು ಕೇಳಬೇಕಲ್ಲವೇ? ಕೊಟ್ಟ ಖಾತೆಯನ್ನು ಸಮರ್ಥವಾಗಿ ನಿರ್ವಹಿಸಬೇಕು. ಮೊದಲು ಮಂತ್ರಿ ಸ್ಥಾನ ಕೇಳುತ್ತಾರೆ, ಆನಂತರ ವಿಧಾನಸೌಧದಲ್ಲಿ ಮೂರನೇ ಮಹಡಿಯ ಕಚೇರಿ ಕೇಳುತ್ತಾರೆ ಎಂದು ಅಸಮಾಧಾನ ಹೊರಹಾಕಿದ್ರು.
ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಮತ್ತು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಮ್ಮ-ತಮ್ಮ ಖಾತೆಗಳ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದರು. ಇದಾದ ಮೇಲೆ ಮಾಧ್ಯಮದವರು ಕುಮಾರಸ್ವಾಮಿ ಬಳೀ ಪ್ರತಿಕ್ರಿಯೆ ಕೇಳಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.