
ಬೆಂಗಳೂರು: ಮಕ್ಕಳನ್ನು ಕಿಡ್ನಾಪ್ ಮಾಡುವವರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವದಂತಿಗಳಿಂದಾಗಿ ಈಗಾಗಲೇ ಆಂಧ್ರ ಪ್ರದೇಶ, ತೆಲಾಂಗಣ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಹಲವಾರು ಮಂದಿಯ ಹತ್ಯೆ ನಡೆದಿದೆ.
ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜ್ಯದ ಜನತೆಯೊಂದಿಗೆ ಮನವಿ ಮಾಡಿಕೊಂಡಿದ್ದು, ಅಂತಹ ಸಂದೇಶಗಳು ಆಧಾರರಹಿತವಾಗಿದ್ದು, ಸಾರ್ವಜನಿಕರು ಅವುಗಳನ್ನು ನಂಬಬಾರದೆಂದು ಮನವಿ ಮಾಡಿದ್ದಾರೆ. ಸೊಶಿಯಲ್ ಮೀಡಿಯಾದಲ್ಲಿ ಮಾಹಿತಿಗಳನ್ನು ಹಂಚುವಾಗ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಮುಖ್ಯಮಂತ್ರಿ ಎಚ್ಡಿಕೆ ಹೇಳಿದ್ದಾರೆ.
ಬೆಂಗಳೂರು ಪೊಲೀಸರು ಕೂಡಾ ಈ ಬಗ್ಗೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.