ಶ್ರೀಲಂಕಾ ದಾಳಿ,  7 ಪಾರ್ಥಿವ ಶರೀರದ ಗುರುತು ಪತ್ತೆ: HDK

Published : Apr 23, 2019, 03:18 PM ISTUpdated : Apr 23, 2019, 03:21 PM IST
ಶ್ರೀಲಂಕಾ ದಾಳಿ,  7 ಪಾರ್ಥಿವ ಶರೀರದ ಗುರುತು ಪತ್ತೆ: HDK

ಸಾರಾಂಶ

ಶ್ರೀಲಂಕಾದ ಉಗ್ರರ ಅಟ್ಟಹಾಸನಕ್ಕೆ ಮೂನ್ನುರಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಕರ್ನಾಟಕದ ಹಲವರು ಮೃತಪಟ್ಟಿದ್ದು ನಾಯಕರ ಆದಿಯಾಗಿ ಸಾಂತ್ವಾನ ಮಿಡಿದಿದ್ದಾರೆ.

 ಉಡುಪಿ(ಏ. 23)  ಶ್ರೀಲಂಕಾ ಸರಣಿ ಬಾಂಬ್ ಬ್ಲ್ಯಾಸ್ಟ್ ಪ್ರಕರಣ ಅತ್ಯಂತ ಮೃಗೀಯ ಘಟನೆ.  300 ಕ್ಕೂ ಹೆಚ್ಚು ಜನರ ಸಾವು ಇಡೀ ಪ್ರಪಂಚಕ್ಕೆ ನೋವು ತಂದಿದೆ.

ಭಾರತದ, ರಾಜ್ಯದ ಹಲವರ ಸಾವಾಗಿದೆ. ನೊಂದ ಕುಟುಂಬಗಳಿಗೆ ನನ್ನ ಸಂತಾಪವಿದೆ. ನೋವು ಭರಿಸುವ ಶಕ್ತಿ ಭಗವಂತ ನೀಡಲಿ. ನನ್ನ ಪಕ್ಷದ ಐದು ಜನ ನಾಯಕರು ಮೃತಪಟ್ಟಿದ್ದಾರೆ. ಅವರು  ಪಕ್ಷದ ಆಧಾರ ಸ್ತಂಭಗಳಾಗಿದ್ದರು.

ಹರಟೆ ಹೊಡೆಯುತ್ತಿದ್ದಾಗ ಪಕ್ಕದಲ್ಲೇ ಢಂ ಅಂತು : ಕನ್ನಡಿಗರ ನೇರ ಅನುಭವ

 ಅವರ ಸಾವು ಪಕ್ಷಕ್ಕೆ- ಅವರ ಕುಟುಂಬಕ್ಕೆ ಆಘಾತ ತಂದಿದೆ. ಕನಸಿನಲ್ಲೂ ನಾನು ಇಂಥದ್ದು ನಡೆಯುತ್ತದೆ ಎಂದು  ಊಹಿಸಿರಲಿಲ್ಲ ನನ್ನ ಜೊತೆ ಬಹಳ ಆತ್ಮೀಯರಾಗಿದ್ದರು. ಹನುಮಂತರಾಯಪ್ಪ, ರಂಗಣ್ಣ, ಶಿವಣ್ಣ, ಲಕ್ಷ್ಮೀನಾರಾಯಣ, ರಮೇಶ್ ಆತ್ಮೀಯರಾಗಿದ್ದರು ಎಂದು ಹೇಳಿದರು.

 ನಾಯಕರ ಸಾವಿನಿಂದ ನೆಲಮಂಗಲದಲ್ಲಿ  ಶೇ. 50 ಶಕ್ತಿ ಕುಸಿತವಾಗಿದೆ. ಪ್ರಾಮಾಣಿಕ , ಸಾಮಾಜಿಕ ಸೇವೆ ಮಾಡುವವರನ್ನು ಕಳೆದುಕೊಂಡಿದ್ದೇವೆ. ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ಕೊಡಲಾಗಿದ್ದು  ಲಂಕಾ ಸಚಿವಾಲಯ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ ಏಳು ಪಾರ್ಥಿವ ಶರೀರ ಗುರುತು ಹಿಡಿಯಲಾಗಿದೆ ಎಂದು ತಿಳಿಸಿದರು.

ಮಂಜುನಾಥ್ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಆಗಾಗ ಕರೆ ಮಾಡಿ ಮಾತನಾಡುತ್ತಿದ್ದೇನೆ. ಮರಣೋತ್ತರ ಪ್ರಕ್ರಿಯೆ ಶೀಘ್ರ ಮುಗಿಸಲು ಮನವಿ ಮಾಡಲಾಗಿದೆ. ಕೃಷ್ಣಪ್ಪ, ಶ್ರೀನಿವಾಸ ಮೂರ್ತಿಗೆ ಜವಾಬ್ದಾರಿ ನೀಡಲಾಗಿದ್ದು  ಖಾಸಗಿ ಏರ್ ಕಾರ್ ಕಾರ್ಗೋಗೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಗ್ಗೆಯೊಳಗೆ ಮೃತದೇಹ ಕರ್ನಾಟಕಕ್ಕೆ ಬರಬೇಕು ಎಂದು ಕುಮಾರಸ್ವಾಮಿ ತಿಳಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೂರು ವರ್ಷಗಳಲ್ಲಿ 57,733 ಸೈಬರ್ ಅಪರಾಧ, ₹5,473 ಕೋಟಿ ವಂಚನೆ: ಗೃಹ ಸಚಿವ ಪರಮೇಶ್ವರ್
ಮೇಕೆದಾಟು, ಭದ್ರಾ, ಕೃಷ್ಣಾ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ವಿಳಂಬ: ಡಿ.ಕೆ.ಶಿವಕುಮಾರ್ ಆಕ್ರೋಶ