ಮತ್ತೆ ರೆಸಾರ್ಟ್​ನತ್ತ ಮುಖ ಮಾಡಿದ ಕುಮಾರಸ್ವಾಮಿ, ದೇವೇಗೌಡ್ರು..!

Published : May 09, 2019, 04:32 PM ISTUpdated : May 09, 2019, 04:34 PM IST
ಮತ್ತೆ ರೆಸಾರ್ಟ್​ನತ್ತ ಮುಖ ಮಾಡಿದ ಕುಮಾರಸ್ವಾಮಿ, ದೇವೇಗೌಡ್ರು..!

ಸಾರಾಂಶ

ಮತ್ತೆ ರೆಸಾರ್ಟ್​ ಮೊರೆಹೋದ  ಸಿಎಂ ಕುಮಾರಸ್ವಾಮಿ ಹಾಗೂ ದೇವೇಗೌಡ| ಮಡಿಕೇರಿ ಬಳಿಯ ರೆಸಾರ್ಟ್​ನಲ್ಲಿ 2 ದಿನ ವಾಸ್ತವ್ಯ ಮಾಡಲಿರುವ ಎಚ್‌ಡಿಕೆ.

ಬೆಂಗಳೂರು, (ಮೇ.09): ಇತ್ತೀಚೆಗೆ ಉಡುಪಿ ಬಳಿಯ ರೆಸಾರ್ಟ್​ನಲ್ಲಿ ಚಿಕಿತ್ಸೆ ಪಡೆದು ಬೆಂಗಳೂರಿಗೆ ಮರಳಿದ್ದ ಸಿಎಂ ಎಚ್​.ಡಿ. ಕುಮಾರಸ್ವಾಮಿ ಮತ್ತೆ ರೆಸಾರ್ಟ್​ನತ್ತ ಮುಖ ಮಾಡಿದ್ದಾರೆ. 

ನಾಳೆ (ಶುಕ್ರವಾರ) ಸಂಜೆ ಕುಮಾರಸ್ವಾಮಿ ಅವರು ಮಡಿಕೇರಿ ಬಳಿಯ ರೆಸಾರ್ಟ್‌ಗೆ ತೆರಳಲಿದ್ದು, ತಮ್ಮ ಕುಟುಂಬದೊಂದಿಗೆ ಮೇ 11 ಮತ್ತು 12 ರಂದು 2 ದಿನರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಒಂದೇ ವಿಮಾನದಲ್ಲಿ ಕಾಪುವಿಗೆ ತೆರಳಿದ HDK ಮತ್ತು HDD

ಮತ್ತೊಂದೆಡೆ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ  ಅವರು ಪತ್ನಿ ಚೆನ್ನಮ್ಮ ಜತೆ ಪ್ರಕೃತಿ ಚಿಕಿತ್ಸೆಗಾಗಿ ಉಡುಪಿ ಬಳಿಯ ರೆಸಾರ್ಟ್​ಗೆ ತೆರಳಿದ್ದಾರೆ.

ಇತ್ತೀಚೆಗೆ ಪುತ್ರ ಎಚ್​ಡಿಕೆ ಜತೆ ಚಿಕಿತ್ಸೆ ಪಡೆದಿದ್ದ ಎಚ್​.ಡಿ. ದೇವೇಗೌಡ ಅವರು ಪುನಃ ಪತ್ನಿ ಚೆನ್ನಮ್ಮ ಅವರೊಂದಿಗೆ ಪ್ರಕೃತಿ ಚಿಕಿತ್ಸೆಗಾಗಿ ಮತ್ತೆ ಉಡುಪಿಯ ರೆಸಾರ್ಟ್​ಗೆ ತೆರಳಿದ್ದಾರೆ.

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುಳೂರಿನಲ್ಲಿರುವ ಸಾಯಿರಾಧ ರೆಸಾರ್ಟ್​ನಲ್ಲಿ 5 ದಿನ ಚಿಕತ್ಸೆ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿಂದೆ ಸಿಎಂ  ರೇಸಾರ್ಟ್‌ನಲ್ಲಿದ್ದಾಗ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ರಾಜ್ಯದಲ್ಲಿ ಕುಡಿಯುವ ನೀರಿಗೆ ತೀವ್ರ ಆಹಾಕಾರ ಉಂಟಾಗಿದ್ದು, ಬರಗಾಲ ಇದೆ.ಇದನ್ನು ಸಮರ್ಪಕವಾಗಿ ನಿಭಾಹಿಸುವ ಬದಲು ಸಿಎಂ ರೇಸಾರ್ಟ್ ನಲ್ಲಿ ಕುತುಳಿತ್ತಿದ್ದಾರೆ ಎಂದು ವಿರೋಧ ಪಕ್ಷ ಬಿಜೆಪಿ ನಾಯಕರು ಆರೋಪಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜನ್ಮ ದಿನದಲ್ಲಿ ಒಮ್ಮೆಯಾದ್ರೂ ಸಂಖ್ಯೆ 1 ಇದ್ಯಾ? ಹಾಗಿದ್ದರೆ ಅದೃಷ್ಟ ನಿಮ್ಮ ಮನೆ ಬಾಗಿಲಿಗೆ- ಎಷ್ಟು ಬಾರಿ ಇದ್ದರೆ ಏನು ಫಲ?
ಅತಿಹೆಚ್ಚು ಮದ್ಯಪಾನ ಮಾಡುವ ಜಗತ್ತಿನ ಸೈನ್ಯ ಯಾವುದು? ಭಾರತದ ಸೇನೆಗೆ ಎಷ್ಟನೇ ಸ್ಥಾನ?