ಎಚ್ಚೆತ್ತ HDK: ಕೊಪ್ಪಳದ ಬಾಲಕಿ, ತಾಯಿ ರಕ್ಷಣೆಗೆ ಆದೇಶ

Published : May 27, 2019, 09:16 PM IST
ಎಚ್ಚೆತ್ತ HDK: ಕೊಪ್ಪಳದ ಬಾಲಕಿ, ತಾಯಿ ರಕ್ಷಣೆಗೆ ಆದೇಶ

ಸಾರಾಂಶ

ಜಗತ್ತಿನ ಪರಿವಿಯೇ ಇಲ್ಲದ 3 ವರ್ಷದ ಮಗುವೊಂದು ಭಿಕ್ಷೆ ಬೇಡಿ, ಕಂಡವರ ಬಳಿ ಆಹಾರ ಬೇಡಿ ಪಡೆದು ಆ ತಾಯಿಯನ್ನು ಜೋಪಾನ ಮಾಡುತ್ತಿದ್ದ ವರದಿ ಮಾಧ್ಯಮಗಳಲ್ಲಿ ಬಿತ್ತರವಾದ ನಂತರ ಆಡಳಿತ ಎಚ್ಚೆತ್ತುಕೊಂಡು ರಕ್ಷಣಾ ಕ್ರಮಕ್ಕೆ ಮುಂದಾಗಿದೆ.

ಬೆಂಗಳೂರು[ಮೇ. 27]  ಕೊಪ್ಪಳ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಬಾಲಕಿಯೊಬ್ಬಳು ಭಿಕ್ಷೆ ಬೇಡಿ ತಾಯಿಯನ್ನು ಪೋಷಿಸುತ್ತಿರುವ ಕುರಿತು ಮಾಧ್ಯಮಗಳಲ್ಲಿ  ವರದಿ ಪ್ರಕಟವಾಗಿದ್ದನ್ನು ಗಮನಿಸಿದ ಸಿಎಂ ಕುಮಾರಸ್ವಾಮಿ ಮಹಿಳೆಯ ಹಾಗೂ ಬಾಲಕಿಯ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ತಿಳಿಸಿದ್ದಾರೆ.

ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಮತ್ತು ಇತರ ಸಿಬ್ಬಂದಿ ಮಹಿಳೆಗೆ ಸೂಕ್ತ ಚಿಕಿತ್ಸೆಯ ನಂತರ ಸ್ವಾಧಾರ ಕೇಂದ್ರಕ್ಕೆ ಸೇರಿಸಲು ಕ್ರಮ ಕೈಗೊಂಡಿವೆ.

ಭಿಕ್ಷೆ ಬೇಡಿ ನಿಶ್ಶಕ್ತ ತಾಯಿಯನ್ನು ಸಲಹುತ್ತಿದೆ 3 ವರ್ಷದ ಮಗು!

ಮಹಿಳೆ ದುರುಗವ್ವಳ ಮಕ್ಕಳನ್ನು ಬಾಲಮಂದಿರಕ್ಕೆ ದಾಖಲಿಸಿ ಶಿಕ್ಷಣ ನೀಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಸೋದರಿ ತಮ್ಮೊಂದಿಗೆ ಸಂಪರ್ಕದಲ್ಲಿ ಇರಲಿಲ್ಲ. ಮಾಧ್ಯಮ ವರದಿ ನೋಡಿ ಕೊಪ್ಪಳಕ್ಕೆ ಆಗಮಿಸಿರುವುದಾಗಿ ಆಕೆಯ ಸೋದರ ಲಕ್ಷ್ಮಣ ತಿಳಿಸಿದ್ದು ಅವರನ್ನು ಮಕ್ಕಳ ಕಲ್ಯಾಣ ಸಮಿತಿ ಸಭೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಮುಖ್ಯಮಂತ್ರಿಗೆ ಮಾಹಿತಿ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಳೆನರಸೀಪುರದ ಲಕ್ಷ್ಮಿನರಸಿಂಹ ಸ್ವಾಮಿ ರಥೋತ್ಸವ: ರಥದ ಅಲಂಕಾರದಲ್ಲಿ ರಾಜಕೀಯ:ಶ್ರೇಯಸ್ ಪಟೇಲ್ ವಿರುದ್ಧ JDS ಕಾರ್ಯಕರ್ತರ ಆಕ್ರೋಶ
ಇರಾನ್ ದಾಳಿಯ ಸಾವಿನ ದವಡೆಯಿಂದ ಪಾರಾಗಿ ಬೆಂಗಳೂರಿಗೆ ಬಂದಿಳಿದ 230 ಕನ್ನಡಿಗರು; ಬಾಂಬ್ ಬೀಳುವ ಅನುಭವ ಬಿಚ್ಚಿಟ್ಟರು!