ಕ್ಷಿಪ್ರ ರಾಜಕೀಯ ಬೆಳವಣಿಗೆ ನಡುವೆಯೂ ಕೆಲಸ ಮರೆಯದ ಸಿಎಂ!

Published : Jul 08, 2019, 02:43 PM IST
ಕ್ಷಿಪ್ರ ರಾಜಕೀಯ ಬೆಳವಣಿಗೆ ನಡುವೆಯೂ ಕೆಲಸ ಮರೆಯದ ಸಿಎಂ!

ಸಾರಾಂಶ

ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆಯುವೆಯೂ ಕೆಲಸ ಮರೆಯದ ಸಿಎಂ| ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಕುಮಾರಸ್ವಾಮಿ| ವಿಧಾನಸೌಧದಲ್ಲಿ ಸಕ್ಕರೆ ಕೈಗಾರಿಕೆಗಳ ಸಭೆ ನಡೆಸುತ್ತಿರುವ ಕುಮಾರಸ್ವಾಮಿ| ವಿಧಾನಸೌಧ 3ನೇ ಮಹಡಿ ಸಮಿತಿ ಕೊಠಡಿಯಲ್ಲಿ ಸಭೆ

ಬೆಂಗಳೂರು[ಜು.08]: ಸರ್ಕಾರ ಪತನದ ಅಂಚಿನಲ್ಲಿದ್ದರೂ ಸಿಎಂ ಕುಮಾರಸ್ವಾಮಿ ತಮ್ಮ ಜವಾಬ್ದಾರಿಯನ್ನು ಮರೆತಿಲ್ಲ. ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಕುಮಾರಸ್ವಾಮಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಸಂಬಂಧಿಸಿದಂತೆ ಕಬ್ಬು ಬೆಳೆಗಾರರೊಂದಿಗೆ ಸಭೆ ನಡೆಸಿದ್ದಾರೆ.

ಹೌದು ರಾಜ್ಯ ಸರ್ಕಾರ ಅರ್ಅಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿದ್ದು, ಅತೃಪ್ತ ಶಾಸಕರು ಮುಂಬೈ ಹೊಟೇಲ್ ನಲ್ಲಿ ಕಾಲ ಕಳೆಯುತ್ತಿದ್ದಾರೆ. ಆದರೆ ಇತ್ತ ಸಿಎಂ ಆಗಿ ಏನ್ ಮಾಡ್ಬೇಕೋ ಅದನ್ನು ಮಾಡ್ತೀನಿ ಎಂದಿರುವ ಕುಮಾರಸ್ವಾಮಿ ವಿಧಾನಸೌಧದ 3ನೇ ಮಹಡಿಯ ಸಮಿತಿ ಕೊಠಡಿಯಲ್ಲಿ ಸಕ್ಕರೆ ಕೈಗಾರಿಕೆಗಳ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಚಿವ ಡಿಸಿ ತಮ್ಮಣ್ಣ, ಸಚಿವ ಪುಟ್ಟರಾಜು ಕೂಡಾ ಭಾಗಿಯಾಗಿದ್ದಾರೆ.

ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸಭೆ ಮುಗಿಸಿ ಪ್ರತಿಕ್ರಿಯಿಸಿರುವ ಸಿಎಂ ಕುಮಾರಸ್ವಾಮಿ 'ಬಿಜೆಪಿ ಏನು ಮಾಡುತ್ತೆ, ಬೇರೆಯವರು ಏನ್ ಮಾಡ್ತಾರೆ ಎಂಬ ಗಮನ ಇಲ್ಲ. ರಾಜಕೀಯ ಬೆಳವಣಿಗೆ ಬಗ್ಗೆ ನಾನು ಗಮನ ಕೊಟ್ಟಿಲ್ಲ. ರಾಜ್ಯದ ಅಭಿವೃದ್ಧಿ ಬಗ್ಗೆಯಷ್ಟೇ ನನ್ನ ಗಮನದಲ್ಲಿದೆ. ಸರ್ಕಾರಕ್ಕೆ ಏನೂ ಆಗಲ್ಲ, ನನಗೇನು ಆತಂಕ ಇಲ್ಲ. ಕಬ್ಬು ಬೆಳೆಗಾರರ ಜತೆ ಚರ್ಚಿಸಿದ್ದೇನೆ. ಸಕ್ಕರೆ ಕಾರ್ಖಾನೆ ಆರಂಭಕ್ಕೆ 69 ಕೋಟಿ ಬಿಡುಗಡೆಗೆ ಒತ್ತಾಯಿಸಿದ್ದಾರೆ. 
69 ಕೋಟಿ ಬಿಡುಗಡೆ ಮಾಡುವುದು ತುಂಬಾ ಕಷ್ಟ' ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
ಗೃಹಲಕ್ಷ್ಮೀ ಯೋಜನೆ ಹಣ ಬಾಕಿ ಇದ್ರೆ ಕೂಡಲೇ ಬಿಡುಗಡೆ: ಸಿಎಂ ಸಿದ್ದರಾಮಯ್ಯ ಭರವಸೆ