'ಬಿಜೆಪಿಗೆ ಶ್ರಾವಣ..ಅಮೆರಿಕದಿಂದಲೇ ರಾಜೀನಾಮೆ ಕೊಟ್ಟು ಬರೋದು ಒಳ್ಳೆದು!'

Published : Jul 06, 2019, 04:28 PM ISTUpdated : Jul 06, 2019, 04:31 PM IST
'ಬಿಜೆಪಿಗೆ ಶ್ರಾವಣ..ಅಮೆರಿಕದಿಂದಲೇ ರಾಜೀನಾಮೆ ಕೊಟ್ಟು ಬರೋದು ಒಳ್ಳೆದು!'

ಸಾರಾಂಶ

ಸಿಎಂ ಕುಮಾರಸ್ವಾಮಿ ಅಮೆರಿಕದಿಂದಲೇ ರಾಜೀನಾಮೆ ರವಾನಿಸಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲೆಸೆದಿದ್ದಾರೆ.

ಬೆಂಗಳೂರು(ಜು. 06)   ಅಮೇರಿಕಾದಲ್ಲಿರುವ ಸಿಎಂ ಕುಮಾರಸ್ವಾಮಿ ಅಲ್ಲಿಂದಲೇ ರಾಜೀನಾಮೆ ನೀಡಲಿ ಎಂದು ಬಿಜೆಪಿ ಶಾಸಕ  ಬಸನಗೌಡ ಪಾಟೀಲ್ ಯತ್ನಾಳ್  ಆಗ್ರಹಿಸಿದ್ದಾರೆ.

ಅಮೆಕಾದಿಂದಲೇ ಸಿಎಂ ಕುಮಾರಸ್ವಾಮಿ ಪ್ಯಾಕ್ಸ್ ಮೂಲಕ ರಾಜೀನಾಮೆ ರವಾನಿಸಲಿ. ಸರ್ಕಾರ ಅಸ್ಥಿರವಾಗಿದೆ. ರಾಜ್ಯಪಾಲರಿಗೆ ರಾಜೀನಾಮೆ ಪತ್ರ ರವಾನಿಸಿ ಬಿಜೆಪಿ ಸರ್ಕಾರ ರಚಿಸಲು ಅನುವು ಮಾಡಿಕೊಡಬೇಕು ಎಂದು ಯತ್ನಾಳ್ ಹೇಳಿದ್ದಾರೆ.

ರಾಜೀನಾಮೆ ಪರ್ವದ ನಡುವೆ ಟ್ರಬಲ್ ಶೂಟರ್‌ ಡಿಕೆಶಿಗೆ ಮತ್ತೊಂದು ಟ್ರಬಲ್

ಕಾಂಗ್ರೆಸ್  ಶಾಸಕರಿಗೆ ಅಸಮಾಧಾನವಿದೆ. ಹಲವು ಸೀನಿಯರ್ಸ್ ಗಳಿಗೆ ಮೈತ್ರಿ ಸರ್ಕಾರದಲ್ಲಿ ಸಮಾಧಾನವಿಲ್ಲ. ಅಸಮಧಾನ ಇರುವ ದೊಡ್ಡ ಗುಂಪೆ ಕಾಂಗ್ರೆಸ್ ನಲ್ಲಿದೆ. ಆರ್ .ವಿ.ದೇಶಪಾಂಡೆ ಸಚಿವರಾಗಿದ್ದರೂ  ಅವರಿಗೆ ಅಸಮಧಾನವಿದೆ. ಇಂಥ ಪರಿಸ್ಥಿತಿಯಲ್ಲಿ ಸರ್ಕಾರ ಉಳಿಯಲು ಸಾಧ್ಯವಿಲ್ಲ ಎಂದು ಹೇಳಿದರು.

ಆಷಾಡದಲ್ಲಿ ಶುಭಕಾರ್ಯ ಮಾಡಲ್ಲ. ಶ್ರಾವಣದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಶ್ರಾವಣದಲ್ಲಿ ಏನಾಗುತ್ತೆ ನೋಡಬೇಕು. ಭವಿಷ್ಯ ಹೇಳೋದನ್ನ ಬಿಟ್ಟಿದ್ದೀನಿ. ಆಶ್ಚರ್ಯಕರವಾದ ರೀತಿಯಲ್ಲಿ ಹಿರಿಯ ಶಾಸಕರು ರಾಜೀನಾಮೆ ನೀಡ್ತಾರೆ.ಕಾಂಗ್ರೆಸ್ ನಿಷ್ಠಾವಂತ ಶಾಸಕರು ರಾಜೀನಾಮೆ ನೀಡ್ತಾರೆ. ಕಾಂಗ್ರೆಸ್ ಬಿಡೊಲ್ಲ ಅನ್ನೋರು ಕಾಂಗ್ರೆಸ್ ಬಿಡಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.

ಆಪರೇಷನ್ ಕಮಲದಲ್ಲಿ ಕೋಟ್ಯಂತರ ಹಣ ನೀಡಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ ರಾಜ್ಯ ಸರ್ಕಾರ ಬಿಜೆಪಿ ಹಣ ನೀಡಿ ಶಾಸಕರನ್ನ ಸೆಳೆದಿರುವ ಬಗ್ಗೆ ತನಿಖೆ ಮಾಡಲಿ. ಅಧಿಕಾರ, ಗೃಹ ಇಲಾಖೆ ಮೈತ್ರಿ ಸರ್ಕಾರದ ಕೈಯಲ್ಲಿ ಇದೆ. ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಬಿಜೆಪಿ ಹಣದ ಆಮಿಚ ಒಡ್ಡುವ ಕೆಲಸ ಮಾಡಿಲ್ಲ ಎಂದು ಹೇಳಿದರು.

ಎಐಸಿಸಿ ಸಂಪೂರ್ಣ ಅಸ್ತಿತ್ವ ಕಳೆದುಕೊಂಡಿದೆ. ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ಮೇಲೆ ಕಾಂಗ್ರೆಸ್ ದಿವಾಳಿ ಆಗಿದೆ. ಕಾಂಗ್ರೆಸ್ ಶಾಸಕರ ಭವಿಷ್ಯ ಬಿಜೆಪಿ ಕಡೆಗೆ ಇದೆ, ಅದಕ್ಕಾಗಿ ಬಿಜೆಪಿ ಬರುತ್ತಿದ್ದಾರೆ.  ಭವಿಷ್ಯಕ್ಕಾಗಿ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬಂದ್ರೆ ಅಚ್ಚರಿ ಪಡಬೇಕಿಲ್ಲ. ವಿಜಯಪುರ ಜಿಲ್ಲೆಯಲ್ಲಿ ಬಿಜೆಪಿಗೆ ಯಾರು ಬರ್ತಾರೆ ಅನ್ನೋದನ್ನ ಕಾಲ ನಿರ್ಣಯಿಸಲಿದೆ. ದೇವೆಗೌಡರು ಮಧ್ಯಂತರ ಚುನಾವಣೆ ಅಂದ್ರೇ ಕಾಂಗ್ರೆಸ್ ಹಾಗೂ ಜೆಡಿಎಸ್ ಖಾಲಿಯಾಗಲಿದೆ ಎಂದು ಭವಿಷ್ಯ ನುಡಿದರು.

ಎಲ್ಲ ಶಾಸಕರು ಬಿಜೆಪಿಗೆ ಬಂದು ಬಿಡ್ತಾರೆ. ಕಾಂಗ್ರೆಸ್, ಜೆಡಿಎಸ್ ನ ಶಾಸಕರಿಗೆ ಚುನಾವಣೆ ಬೇಕಾಗಿಲ್ಲ ಎಂದು ಹೇಳಲು ಯತ್ನಾಳ್ ಮರೆಯಲಿಲ್ಲ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

BREAKING: ದಾವಣಗೆರೆ ಗಡಿ ಭಾಗದಲ್ಲಿ ಭಾರೀ ಸ್ಫೋಟದ ಸದ್ದು; ಭೂಮಿ ಕಂಪಿಸಿದ ಅನುಭವ, ಚಿಕ್ಕಮಲ್ಲನಹೊಳೆ ಗ್ರಾಮಸ್ಥರಲ್ಲಿ ಆತಂಕ
20 ವರ್ಷಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದ ವೃದ್ಧ ದಂಪತಿಯನ್ನ ಒಂದುಗೂಡಿಸಿದ ಲೋಕ ಅದಾಲತ್!