ದಿನ ದಿನಕ್ಕೂ ಏರಿಕೆಯಾಗಿ ಜನರ ತಲೆ ಬಿಸಿಗೆ ಕಾರಣವಾಗಿದ್ದ ತೈಲ ಬೆಲೆ ಇದೀಗ ರಾಜ್ಯದಲ್ಲಿ ಇಳಿಕೆಯಾಗುತ್ತಿದೆ. ಸಿಎಂ ಕುಮಾರಸ್ವಾಮಿ ಬೆಲೆ ಇಳಿಕೆಗೆ ಸೂಚನೆ ಹೊರಡಿಸಿದ್ದಾರೆ.
ಬೆಂಗಳೂರು : ವಾಹನ ಸವಾರರಿಗೆ ಇಲ್ಲಿದೆ ಗುಡ್ ನ್ಯೂಸ್. ದಿನದಿನಕ್ಕೆ ಏರಿಕೆಯಾಗಿ ಜನರನ್ನು ಆತಂಕಕ್ಕೆ ದೂಡಿದ್ದ ತೈಲ ಬೆಲೆ ಇದೀಗ ರಾಜ್ಯದಲ್ಲಿ ಇಳಿಕೆಯಾಗುತ್ತಿದೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟ ಜನತೆಗೆ ಸಿಎಂ ಕುಮಾರಸ್ವಾಮಿ ಶುಭ ಸುದ್ದಿಯನ್ನು ನಿಡಿದ್ದಾರೆ.
ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ 2 ರಿಂದ 3ರು.ನಷ್ಟು ಇಳಿಕೆಗೆ ಸಿಎಂ ಎಚ್ಡಿಕೆ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ನಾಳೆಯಿಂದ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗುತ್ತಿದೆ.
ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿರುವ ಸಿಎಂ ಕುಮಾರಸ್ವಾಮಿ ನಾಳೆಯಿಂದಲೇ ದರ ಇಳಿಸಲು ಸೂಚನೆ ನೀಡಿದ್ದು, ಅಧಿಕೃತ ಆದೇಶವೊಂದೇ ಬಾಕಿ ಇದೆ.