
ಬೆಂಗಳೂರು: ತಮ್ಮ ಸರ್ಕಾರ ಉರುಳಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾದ ಕಿಂಗ್ಪಿನ್ಗಳನ್ನು ಮಟ್ಟ ಹಾಕಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿರ್ಧರಿಸಿದ್ದು, ಈ ಸಂಬಂಧ ಬೆಂಗಳೂರು ಅಪರಾಧ ವಿಭಾಗದ ನೂತನ ಹೆಚ್ಚುವರಿ ಆಯುಕ್ತರಾಗಿ ನೇಮಕಗೊಂಡಿರುವ ಅಲೋಕ್ ಕುಮಾರ್ ಅವರಿಗೆ ಸೂಚನೆ ನೀಡಿದ್ದಾರೆ.
ಶನಿವಾರ ಬೆಳಗಾವಿಗೆ ತೆರಳಿದ್ದ ವೇಳೆ ಸದ್ಯ ಅಲ್ಲಿಯೇ ಪಶ್ಚಿಮ ವಲಯದ ಐಜಿಪಿಯಾಗಿರುವ ಅಲೋಕ್ ಕುಮಾರ್ ಅವರೊಂದಿಗೆ ಕುಮಾರಸ್ವಾಮಿ ಅವರು ಕೆಲ ನಿಮಿಷಗಳ ಕಾಲ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು ಎಂದು ತಿಳಿದು ಬಂದಿದೆ. ರಾಜಧಾನಿ ಬೆಂಗಳೂರಿಗೆ ಬಂದು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ನಗರದಲ್ಲಿ ಹೆಚ್ಚುತ್ತಿರುವ ಇಸ್ಪೀಟ್ ಜೂಜು, ಅಕ್ರಮ ಲಾಟರಿ ದಂಧೆ, ಹೈಟೆಕ್ ವೇಶ್ಯಾವಾಟಿಗೆ, ಮೀಟರ್ ಬಡ್ಡಿ ಮಾಫಿಯಾಗಳಲ್ಲಿ ತೊಡಗಿಸಿಕೊಂಡವರಿಗೆ ಬುದ್ಧಿ ಕಲಿಸುವ ಮೂಲಕ ಕಡಿವಾಣ ಹಾಕಬೇಕು. ಯಾವುದೇ ಕಾರಣಕ್ಕೂ ಮೃದು ಧೋರಣೆ ತಾಳದೆ, ಯಾವುದೇ ಮುಲಾಜು ನೋಡದೆ ಕಠಿಣ ಕ್ರಮ ಕೈಗೊಳ್ಳಿ.
ನಿಮಗೆ ಬೇಕಾದ ಎಲ್ಲ ಸಹಕಾರ ನೀಡಲಾಗುವುದು ಎಂಬ ಮಾತನ್ನು ಕುಮಾರಸ್ವಾಮಿ ಅವರು ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ, ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಹುನ್ನಾರ ನಡೆಸಿದ್ದಾರೆ ಎನ್ನಲಾದ ಕಿಂಗ್ಪಿನ್ಗಳಿಗೆ ನಡುಕ ಉಂಟಾಗಿದೆ. ಅಲೋಕ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ ತಕ್ಷಣವೇ ಕಾರ್ಯಾರಂಭ ಮಾಡಲಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.