
ನವದೆಹಲಿ[ಸೆ.10] ಪ್ರಧಾನಿ ಮೋದಿ ಭೇಟಿ ಮಾಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರದಿಂದ ಸೆಸ್ ಕಡಿಮೆ ಮಾಡುವ ಚಿಂತನೆ ಇದ್ದು ಆರ್ಥಿಕ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿಕೊಂಡರೆ ನಮ್ಮಲ್ಲಿ ಪೆಟ್ರೋಲ್ ದರ ಕಡಿಮೆಯಿದೆ. ಕೇಂದ್ರ ಸರ್ಕಾರದ ತೈಲ ನೀತಿಗಳ ಬದಲಾವಣೆಯಿಂದಾಗಿ ದರ ಏರಿಕೆಯಾಗಿದೆ ಎಂಬ ಅಂಶವನ್ನು ಪುನರುಚ್ಛಾರ ಮಾಡಿದರು.
ರೈತರ ಸಾಲಮನ್ನಾ ಮಾಡಲು ಕುಮಾರಸ್ವಾಮಿ ಸರ್ಕಾರ ಪೆಟ್ರೋಲ್ ಮೇಲಿನ ತೆರಿಗೆಯನ್ನು 30% ರಿಂದ 32% ಗೆ ಏರಿಕೆ ಮಾಡಿದೆ. ಹಾಗೆಯೇ ಡೀಸೆಲ್ ಮೇಲಿನ ತೆರಿಗೆಯನ್ನು 19% ನಿಂದ 21% ಗೆ ಏರಿಕೆ ಮಾಡಿತ್ತು. ಸಂಪೂರ್ಣ ದರದ ಮೇಲೆ ಸೆಸ್ ಏರಿಕೆ ಮಾಡಿದ್ದು ಗ್ರಾಹಕರ ಜೇಬಿಗೆ ದೊಡ್ಡ ಕತ್ತರಿ ಹಾಕಿತ್ತು. ರಾಜಸ್ಥಾನ ಸರಕಾರದ ಇಳಿಕೆ ಕ್ರಮವನ್ನು ರಾಜ್ಯ ಸರಕಾರವೂ ಮಾಡಲಿದೆಯೇ ಕಾದು ನೋಡಬೇಕಿದೆ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.