ಸಂಪುಟ ಸರ್ಕಸ್'ಗೆ ಇಬ್ರಾಹಿಂ ಹೊಸ ತಿರುವು

Published : Aug 27, 2017, 09:27 AM ISTUpdated : Apr 11, 2018, 01:09 PM IST
ಸಂಪುಟ ಸರ್ಕಸ್'ಗೆ ಇಬ್ರಾಹಿಂ ಹೊಸ ತಿರುವು

ಸಾರಾಂಶ

ವಿಧಾನ ಪರಿಷತ್ತಿನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಸಿ.ಎಂ. ಇಬ್ರಾಹಿಂ ಸಂಪುಟ ಸೇರಲು ತೀವ್ರ ಲಾಬಿ ನಡೆಸುತ್ತಿದ್ದಾರೆ. ಇದರಿಂದಾಗಿ ಸಂಪುಟ ವಿಸ್ತರಣೆ ಪ್ರಕ್ರಿಯೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಬೆಂಗಳೂರು: ವಿಧಾನ ಪರಿಷತ್ತಿನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಸಿ.ಎಂ. ಇಬ್ರಾಹಿಂ ಸಂಪುಟ ಸೇರಲು ತೀವ್ರ ಲಾಬಿ ನಡೆಸುತ್ತಿದ್ದಾರೆ. ಇದರಿಂದಾಗಿ ಸಂಪುಟ ವಿಸ್ತರಣೆ ಪ್ರಕ್ರಿಯೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಸಂಪುಟದಲ್ಲಿ ಖಾಲಿ ಇರುವ ಮೂರು ಸ್ಥಾನಗಳಲ್ಲಿ ಒಂದನ್ನು ಪರಿಶಿಷ್ಟ ಜಾತಿಯ ಎಡಗೈ ಬಣಕ್ಕೆ ಕೊಡಬೇಕೊ ಅಥವಾ ಬಲಗೈ ಬಣಕ್ಕೆ ನೀಡಬೇಕೊ ಎಂಬ ಬಗ್ಗೆ ಗೊಂದಲ ಸೃಷ್ಟಿಯಾಗಿದೆ. ಉಳಿದೆರಡು ಸ್ಥಾನಗಳಲ್ಲಿ ಒಂದನ್ನು ಕುರುಬ ಸಮಾಜಕ್ಕೆ ಮತ್ತೊಂದು ಲಿಂಗಾಯತ ಸಮುದಾಯಕ್ಕೆ ಕೊಡಲಾಗುವುದು ಎಂಬ ಮಾತುಗಳು ಸರ್ಕಾರ ಮತ್ತು ಪಕ್ಷದೊಳಗೆ ಕೇಳಿಬಂದಿತ್ತು. ಈಗ ಅಲ್ಪಸಂಖ್ಯಾತ ಸಮುದಾಯದ ಇಬ್ರಾಹಿಂ ಹೆಸರು ಮುಂಚೂಣಿಗೆ ಬಂದಿರುವುದರಿಂದ ಲಿಂಗಾಯತ ಸಮುದಾಯಕ್ಕೆ ಅವಕಾಶ ಕೈತಪ್ಪುವ ಸಾಧ್ಯತೆ ಇದೆ ಎಂದು ಮೂಲಗಳು ವಿವರಿಸಿವೆ.

ರಾಜ್ಯದ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಶುಕ್ರವಾರ ಭೇಟಿ ಮಾಡಿದ ಸಂದರ್ಭದಲ್ಲಿ ಇಬ್ರಾಹಿಂ ಹೆಸರನ್ನು ಮುಖ್ಯಮಂತ್ರಿಗಳೇ ಶಿಫಾರಸು ಮಾಡಿದ್ದಾಗಿ ಮೂಲಗಳು ಹೇಳಿವೆ.

ಈಗಾಗಲೇ ಇಬ್ರಾಹಿಂ ಅವರನ್ನು ಪರಿಷತ್ತಿಗೆ ಆಯ್ಕೆ ಮಾಡಿರುವ ಕುರಿತು ಕಾಂಗ್ರೆಸ್‌ನೊಳಗೆ ಅಸಮಾಧಾನ ಹೊಗೆಯಾಡುತ್ತಿದೆ. ಅವರನ್ನು ಸಚಿವರನ್ನಾಗಿ ನೇಮಕ ಮಾಡಿದರೆ ಇನ್ನಷ್ಟು ಅತೃಪ್ತಿ ಭುಗಿಲೇಳಲಿದೆ ಎಂದೂ ಮೂಲಗಳು ಖಚಿತಪಡಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

14 ವರ್ಷಗಳಲ್ಲಿ ಭಾರತೀಯ ಪೌರತ್ವ ತ್ಯಜಿಸಿದವರ ಸಂಖ್ಯೆ ಎಷ್ಟು? ಈ ವಲಸೆಗೆ ಏನು ಕಾರಣ?
ಚೈತ್ರಾ ಕುಂದಾಪುರಗೆ ಮತ್ತೊಮ್ಮೆ ಕಾನೂನು ಸಂಕಷ್ಟ; ಅಪ್ಪನ ವಿಚಾರಕ್ಕೆ ಬಿಗ್ ಬಾಸ್ ಮನೆಯಿಂದ ಹೊರ ಬರ್ತಾರಾ?