
ವಿಧಾನ ಪರಿಷತ್ : ಸಮ್ಮಿಶ್ರ ಸರ್ಕಾರದ ಮದುವೆಯಲ್ಲಿ ತಾಳಿ ಕಟ್ಟಿಆಗಿದೆ. ಸಂಸಾರ ಆರಂಭವಾಗಿದೆ. ಮತ್ತೆ ವಧುವನ್ನು ಹೊತ್ತುಕೊಂಡು ಹೋಗುವ ಪ್ರಯತ್ನ ಮಾಡಬೇಡಿ. ಕನಿಷ್ಠ ಒಂದು ವರ್ಷವಾದರೂ ಸಂಸಾರ ನಡೆಸಲಿ ಎಂದು ಕಾಂಗ್ರೆಸ್ ಸದಸ್ಯ ಸಿ.ಎಂ. ಇಬ್ರಾಹಿಂ ಹಾಸ್ಯ ಚಟಾಕಿ ಹಾರಿಸಿದರು.
ರಾಜ್ಯಪಾಲರ ಭಾಷಣದ ಮೇಲೆ ಮಾತನಾಡಿದ ಅವರು, ಮದುವೆಗೂ ಮೊದಲು ಬಿಜೆಪಿಯವರು ಹೊತ್ತುಕೊಂಡು ಹೋಗುವ ಪ್ರಯತ್ನ ಮಾಡಿದರೂ ಕೊನೆಗೂ ಸಿಗಲಿಲ್ಲ. ಮತ್ತೆ ಪ್ರಯತ್ನ ಮಾಡಬೇಡಿ. ಐದು ವರ್ಷ ಆಡಳಿತ ನಡೆಸಬೇಕು. ಚುನಾವಣೆಗೆ ಹೋದರೆ ಯಾರೊಬ್ಬರ ಬಳಿಯೂ ಹಣವಿಲ್ಲ. ಕನಿಷ್ಠ ಒಂದು ಚುನಾವಣೆಗೆ 10 ಕೋಟಿ ರು. ದುಡ್ಡು ಬೇಕು. ಆದ್ದರಿಂದ ಕನಿಷ್ಠ 1 ವರ್ಷವಾದ್ರೂ ಆಡಳಿತ ನಡೆಸಲು ಬಿಡಿ ಎಂದು ತಮ್ಮದೇ ಶೈಲಿಯಲ್ಲಿ ಹೇಳಿದಾಗ ಸದನದಲ್ಲಿ ನಗು ತುಂಬಿಕೊಂಡಿತು.
ಹಿಂದಿನ ಐಎಎಸ್ ಅಧಿಕಾರಿಗಳು ಬಹಳ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದರು. ಇಂದಿನವರ ಬಗ್ಗೆ ಏನು ಹೇಳುವುದೋ ಗೊತ್ತಿಲ್ಲ. ಸರ್ಕಾರ ಸುಸೂತ್ರವಾಗಿ ನಡೆಯಬೇಕಾದರೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಅಂಕುಶ ಹಾಕಬೇಕಿದೆ. ಅಧಿಕಾರಿಗಳ ಸೇವಾ ದಾಖಲೆಗಳನ್ನು ಗಮನಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.