
ಬೆಂಗಳೂರು, (ಜೂನ್.11): ರೈತರ ಖಾತೆಗೆ ಜಮೆಯಾಗಿದ್ದ ಸಾಲ ಮನ್ನಾದ ಹಣ ಏಕಾಏಕಿ ರೀಫಂಡ್ ಆಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ.
"
ಯಾದಗಿರಿ ರೈತರ ಖಾತೆಗೆ ಜಮೆಯಾಗಿದ್ದ ಸಾಲ ಮನ್ನಾದ ಹಣ ರೀಫಂಡ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಮತ್ತೆ ಮಾಧ್ಯಮಗಳ ಮೇಲೆಯೇ ಗೂಬೆ ಕೂರಿಸಿದ್ದಾರೆ.
"
"
ಯಾದಗಿರಿ ಜಿಲ್ಲೆಯ ರಾಷ್ಟ್ರೀಕೃತ ಬ್ಯಾಂಕುಗಳು ರೈತರ ಸಾಲಗಳ ವರ್ಗೀಕರಣ ಮಾಡುವಲ್ಲಿ ಆಗಿರುವ ಲೋಪದಿಂದಾಗಿ ಈ ಗೊಂದಲ ಉಂಟಾಗಿದೆ. ಪ್ರತಿ ಸಾಲ ಮನ್ನಾ ನಂತರ ರಾಜ್ಯ ಸರ್ಕಾರ ನಡೆಸುವ ಆಡಿಟ್ ಸಂದರ್ಭದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ.
ಈ ವರೆಗೆ 13,988 ರೈತರ ಸಾಲ ಖಾತೆಗಳಲ್ಲಿ ಈ ಗೊಂದಲ ಉಂಟಾಗಿದೆ. ಸ್ಥಳೀಯ ಬ್ಯಾಂಕುಗಳು ತಮ್ಮಿಂದ ಆಗಿರುವ ಲೋಪದ ಕುರಿತು ಸ್ಪಷ್ಟನೆ ನೀಡುವಂತೆ ಸೂಚಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಶುಕ್ರವಾರ, ಜೂನ್ 14ರಂದು ಮಧ್ಯಾಹ್ನ 2.30 ಗಂಟೆಗೆ ರಾಜ್ಯ ಮಟ್ಟದ ಬ್ಯಾಂಕರುಗಳ ಸಭೆ ಕರೆಯಲಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.