ಅಂಡಮಾನ್​​ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 50 ಕನ್ನಡಿಗರಿಗೆ ಸಿಎಂ ಸಹಾಯ ಹಸ್ತ

Published : May 04, 2019, 09:36 PM IST
ಅಂಡಮಾನ್​​ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 50 ಕನ್ನಡಿಗರಿಗೆ ಸಿಎಂ ಸಹಾಯ ಹಸ್ತ

ಸಾರಾಂಶ

ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡಿಗರಿಗೆ ಮುಖ್ಯಮಂತ್ರಿಗಳ ಸಹಾಯಹಸ್ತ| ಪ್ರವಾಸದ ನಿಮಿತ್ತ ಅಂಡಮಾನ್ ಮತ್ತು  ನಿಕೋಬಾರ್​ಗೆ ತೆರಳಿ ವಿಮಾನ ಲಭ್ಯತೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದ ಸುಮಾರು 50 ಮಂದಿ ಕನ್ನಡಿಗರು.

ಬೆಂಗಳೂರು, [ಮೇ.04]: ಪ್ರವಾಸದ ನಿಮಿತ್ತ ಅಂಡಮಾನ್ ಮತ್ತು ನಿಕೋಬಾರ್​ಗೆ ತೆರಳಿ ವಿಮಾನ ಲಭ್ಯತೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದ ಸುಮಾರು 50 ಮಂದಿ ಕನ್ನಡಿಗರಿಗೆ ರಾಜ್ಯ ಸರ್ಕಾರ ನೆರವಾಗಿದೆ.

 ಪ್ರವಾಸದಲ್ಲಿದ್ದ ಮೂಡಿಗೆರೆಯ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಶಶಿಕಲಾ ಅವರು ತಮ್ಮ ಸಮಸ್ಯೆಯನ್ನು ದೂರವಾಣಿ ಮೂಲಕ ಇಂದು ಮುಖ್ಯಮಂತ್ರಿ ಕಚೇರಿಯ ಗಮನಕ್ಕೆ ತಂದಿದ್ದರು.

ಈ ವಿಷಯವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಗಮನಕ್ಕೆ ಬಂದಿದ್ದು, ಕೂಡಲೇ ಪರಿಸ್ಥಿತಿಯನ್ನು ನಿಭಾಯಿಸಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರಿಗೆ ಸಹಾಯ ಮಾಡುವಂತೆ ತಮ್ಮ ಮುಖ್ಯ ಕಾರ್ಯದರ್ಶಿ ಹಾಗೂ ದೆಹಲಿಯಲ್ಲಿರುವ ಸ್ಥಾನಿಕ ಆಯುಕ್ತರಿಗೆ ಸಿಎಂ ಸೂಚಿಸಿದರು. 

ಸಿಎಂ ಸೂಚನೆ ಮೇರೆಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದ ದೆಹಲಿಯ ಸ್ಥಾನಿಕ ಆಯುಕ್ತರು ಸಮಸ್ಯೆಯನ್ನು ಬಗೆಹರಿಸಿದ್ದು, ನಾಳೆ [ಭಾನುವಾರ] ಬೆಳಗಿನ ವಿಮಾನದಲ್ಲಿ ಬೆಂಗಳೂರಿಗೆ ಹಿಂದಿರುಗಲು ವ್ಯವಸ್ಥೆ ಕಲ್ಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

30 ವರ್ಷಗಳ ನಂತರ ರಾಮನಗುಡ್ಡ ಭೂತಾಯಿಯ ಒಡಲು ತುಂಬಲು ಬಂದ ಕಾವೇರಿ: ಕುಣಿದಾಡಿದ ರೈತರು
ಕರಾವಳಿ ರೈಲ್ವೆ ಪ್ರಯಾಣಿಕರಿಗೆ ಸಂತಸದ ಸುದ್ದಿ ನೀಡಿದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ