
ಬೆಂಗಳೂರು (ಜೂ. 20): ಬಹುನಿರೀಕ್ಷೆಯ ಆರು ಬೋಗಿಯ ಮೆಟ್ರೋ ರೈಲು ವಾಣಿಜ್ಯ ಸಂಚಾರಕ್ಕೆ ಶುಕ್ರವಾರ ಅಧಿಕೃತ ಚಾಲನೆಗೆ ಬೆಂಗಳೂರು ಮೆಟ್ರೋ ರೈಲು ನಿಗಮ ಸಿದ್ಧತೆ ನಡೆಸಿದೆ. ಗುರುವಾರ ಸಂಜೆ ಆರು ಬೋಗಿಯ ಮೆಟ್ರೋ ರೈಲು ಪ್ರಾಯೋಗಿಕವಾಗಿ ಸಂಚರಿಸಲಿದೆ. ನಂತರ ಶುಕ್ರವಾರ (ಜೂ.22) ಅಧಿಕೃತ ಚಾಲನೆ ನೀಡಲಾಗುವುದು.
ಬೈಯಪ್ಪನಹಳ್ಳಿಯ ಮೆಟ್ರೋ ನಿಲ್ದಾಣದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಸಿರು ನಿಶಾನೆ ತೋರಿಸುವರು ಹಾಗೂ ಬೈಯಪ್ಪನಹಳ್ಳಿಯಿಂದ ಮೆಜೆಸ್ಟಿಕ್ವರೆಗೆ ಮೆಟ್ರೊದಲ್ಲಿ ಪ್ರಯಾಣಿಸಲಿದ್ದಾರೆ ಎಂದು
ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಂದ್ರಜೈನ್ ಹೇಳಿದ್ದಾರೆ.
ಮೊದಲ ಹಂತದಲ್ಲಿ ಬೈಯಪ್ಪನಹಳ್ಳಿಯಿಂದ ವಿಜಯನಗರ ಮಾರ್ಗವಾಗಿ ನಾಯಂಡಹಳ್ಳಿವರೆಗೆ ಆರು ಬೋಗಿಯ ಮೆಟ್ರೊ ರೈಲು ಸಂಚರಿಸಲಿದೆ. ಬಿಇಎಂಎಲ್ ಸಂಸ್ಥೆಯು ಜುಲೈನಿಂದ ಪ್ರತಿ ತಿಂಗಳು 3 ಬೋಗಿಗಳ ೪ ಸೆಟ್ಗಳನ್ನು ಸಂಸ್ಥೆಗೆ ಹಸ್ತಾಂತರಿಸಲಿದೆ. ಆದ್ದರಿಂದ ಆಗಸ್ಟ್ ನಂತರ 6 ಬೋಗಿಯ ರೈಲುಗಳ ಸಂಖ್ಯೆ ಹೆಚ್ಚಳ ಮಾಡಲಾಗುವುದು. ಒಮ್ಮೆ 6 ಬೋಗಿಯ ರೈಲು ಯಶಸ್ವಿ ಸಂಚಾರ ನಡೆಸಿದ ನಂತರ ಉಳಿದ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸುವುದು ಕಷ್ಟವಾಗಲಾರದು. ಮೆಟ್ರೋ ಪ್ರಯಾಣಿಕರು ಇದರ ಲಾಭ ಪಡೆಯಲಿದ್ದಾರೆ. ಜತೆಗೆ ಬೆಂಗಳೂರು ಮಹಾನಗರದ ಟ್ರಾಫಿಕ್ ಸಮಸ್ಯೆಯಲ್ಲೂ ಸುಧಾರಣೆಗೆ ಇದು ಸಹಕಾರಿಯಾಗಲಿದೆ ಎಂದು ಜೈನ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.